
ದಾವಣಗೆರೆ: ರಾಜ್ಯದಲ್ಲಿ ಬೆಳ್ಳಿ, ಬಂಗಾರದಂತೆ ಅಡಿಕೆ ದರದಲ್ಲಿಯೂ ಏರಿಳಿತ ಆಗುತ್ತಿರುತ್ತಲಿರುತ್ತದೆ. ಇನ್ನು ಇಳಿಕೆಯತ್ತ ಸಾಗಿದ್ದ ದರ ಮತ್ತೆ ಇದೀಗ ತುಸು ಏರಿಕೆಯತ್ತ ಸಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಹಲವೆಡೆಯೂ ಅಡಿಕೆ ಬೆಳೆಯಲಾಗುತ್ತಿದೆ. ಹಾಗಾದ್ರೆ ಇದೀಗ ಜಿಲ್ಲೆಯಲ್ಲಿ ಇಂದಿನ (ಜೂನ್ 12) ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಮಾಹಿತಿಯನ್ನು ಸಂಪೂರ್ಣವಾಗಿ ಅಂಕಿ ಅಂಶಗಳ ಸಹಿತ ವಿವರನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಆಗಿದೆ. ಪ್ರಸ್ತುತ ಕ್ವಿಂಟಾಲ್ ಅಡಿಕೆ ಗರಿಷ್ಠ ದರ 58,599 ರೂಪಾಯಿ ಆಗಿದೆ. ಇಳಿಕೆಯತ್ತ ಸಾಗಿದ್ದ ದರ ಮತ್ತೆ ಇದೀಗ ಏರಿಕೆಯತ್ತ ಸಾಗಿದ್ದು, ಇದರಿಂದ ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ತುಸು ಹೆಚ್ಚಾದಂತಾಗಿದೆ.

j3tvkannada
ಇದೀಗ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್ಗಳಲ್ಲಿ) ಗರಿಷ್ಠ ದರ 58,599 ರೂಪಾಯಿ, ಕನಿಷ್ಠ ದರ 52,000 ರೂಪಾಯಿ ಇದ್ದು, ಸರಾಸರಿ ಬೆಲೆ 57,019 ರೂಪಾಯಿ ಇದೆ. ಬೆಟ್ಟೆ ಅಡಿಕೆ ಗರಿಷ್ಠ ದರ 32,679 ರೂಪಾಯಿ, ಕನಿಷ್ಠ ದರ 28,336 ರೂಪಾಯಿ, ಸರಾಸರಿ ದರ 30,570 ರೂಪಾಯಿ ಆಗಿದೆ. ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಿದ್ದ ಕ್ವಿಂಟಾಲ್ ಅಡಿಕೆ ದರ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತವಾಗಿ ಏರಿಕೆಯಾಗುತ್ತಲೇ ಬಂದಿತ್ತು. ಅಲ್ಲದೆ, ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಡಿತ್ತು. ಆದರೆ ಮೇ ಅಂತ್ಯದಿಂದ ಇಲ್ಲಿಯವರೆಗೂ ಜೂನ್ ಮೊದಲನೇ ವಾರದವರೆಗೂ ಇಳಿಕೆಯತ್ತ ಸಾಗಿದ್ದು, ಇದೀಗ ತುಸು ಏರಿಕೆಯಾಗಿದೆ.

j3tvkannada
ಮೇ ಆರಂಭದಲ್ಲಿ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಜೂನ್ ಮೊದಲ ವಾರದಲ್ಲೇ ಮತ್ತೆ ಇಳಿಕೆಯಾಗಿ ಮತ್ತೆ ತುಸು ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಮತ್ತೆ 60,000 ಗಡಿ ದಾಡುವ ಭರವಸೆಯಲ್ಲಿ ಬೆಳೆಗಾರರಿದ್ದಾರೆ. 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ ಅಂದರೆ, 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ಬಂದು ತಲುಪಿತ್ತು. ಇದೀಗ 2025ರ ಏಪ್ರಿಲ್ ತಿಂಗಳ ಆರಂಭದಿಂದ ಏರಿಕೆ ಆಗುತ್ತಲೇ ಬಂದಿತ್ತು. ಆದರೆ ಜೂನ್ ಆರಂಭದಲ್ಲಿ ಮತ್ತೆ ಇಳಿಕೆಯಾಗಿದ್ದು, ಇದರಿಂದ ರೈತರ ಮುಖದಲ್ಲಿದ್ದ ಮಂದಹಾಸ ತುಸು ಕಡಿಮೆ ಆದಂತಾಗಿತ್ತು. ಕಳೆದ ಬಾರಿ ಮುಂಗಾರು ಮಳೆ ಆರ್ಭಟದಿಂದ ಉತ್ತಮ ಫಸಲು ಏನೋ ಬಂದಿತ್ತು. ಇನ್ನೂ ಈ ಬಾರಿ ಅವಧಿಗೂ ಮುನ್ನ ಮುಂಗಾರು ಎಂಟ್ರಿ ಕೊಟ್ಟಿದೆ.
ಈ ಹಿನ್ನೆಲೆ ಉತ್ತಮ ಫಸಲಿನ ಜೊತೆ, ಬೆಲೆ ಏರಿಕೆ ಆಗುವ ಭರವಸೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ. ಮತ್ತೊಂದೆಡೆ ಮಳೆಗಾಲದಲ್ಲಿ ಅಡಿಕೆಯನ್ನು ರಕ್ಷಣೆ ಮಾಡಿಕೊಳ್ಳುವುದೇಗೆ ಎನ್ನುವ ಆತಂಕವೂ ಕೂಡ ಬೆಳೆಗಾರರನ್ನು ಕಾಡುತ್ತಿದೆ. ಸದ್ಯ ಇದೀಗ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿರುವ ಪರಿಣಾಮ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಅದರಲ್ಲೂ ಮುಂದಿನ ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡು, ಕರಾವಳಿ ಕರ್ನಾಟಕ ಸೇರಿದಂತೆ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ದಾವಣಗೆರೆ ಜಿಲ್ಲೆ ಸಹ ದಕ್ಷಿಣ ಒಳನಾಡಿಗೆ ಸೇರಲಿದೆ. ಇಲ್ಲಿನ ರೈತರಿಗೆ ಒಂದೆಡೆ ಸಂತಸವಾದ್ರೆ, ಮತ್ತೊಂದೆಡೆ ಭಾರೀ ಮಳೆಯಾದ್ರೆ ಅಡಿಕೆಯನ್ನು ಹೇಗೆ ಒಣಗಿಸುವುದು ಎಂಬ ಚಿಂತೆಯಲ್ಲಿದ್ದಾರೆ.