
ವಿಜಯನಗರ: ಗ್ರಾಮೀಣ ಭಾಗದ ರಸ್ತೆಯ ಬದಿಯ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟದ ದೂರುಗಳಿವೆ, ಮದ್ಯಪಾನ ಮಾಡಿ ಲಾರಿ ಚಲಾಯಿಸುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ ಕೂಡಲೇ ಅಬಕಾರಿ ಅಧಿಕಾರಿಗಳು ಇದನ್ನು ನಿಯಂತ್ರಣಕ್ಕೆ ತರಬೇಕು, ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಎಚ್ಚರಿಕೆ ನೀಡಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಹಲವಾರು ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು.
ಗ್ರಾ .ಪಂ. ಉಪಕಾರ್ಯದರ್ಶಿ ಗಿರಿಜಾ ಶಂಕರ್ ನೇತೃತ್ವ ವಹಿಸಿ ತಾಲ್ಲೂಕು ಪಂಚಾಯಿತ್ ದಿ.ಎಂ.ವೈ. ಘೋರ್ಪಡೆ ಸಭಾಂಗಣದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಚೋರನುರು ಪಿ.ಡಿ.ಓ ಕರಿಬಸಪ್ಪ ಗ್ರಾಮೀಣ ಭಾಗದಲ್ಲಿ ಜಲಜೀವನ ಮಿಷನ್ ಅಡಿ ಅಗೆದು ರಸ್ತೆಗಳನ್ನು ಸಮರ್ಪಕವಾಗಿ ಮುಚ್ಚದೇ ಇರುವುದರಿಂದ ಅಗಾಗ್ಗೆ ಬೈಕ್ ಸವಾರರು ಕೆಳಗೆ ಬಿದ್ದು ಗಾಯಗೊಳ್ಳುತ್ತಿದ್ದಾರೆ. ಗ್ರಾಮ ಪಂಚಾಯಿತಿ ಅರ್ಧಕ್ಕೆ ಕಾಮಗಾರಿಯನ್ನು ನಿಲ್ಲಿಸಿದ್ದಾರೆ ಎಂದು ದೂರಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಕೂಡಲೇ ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರರಿಗೆ ಸೂಚನೆ ನೀಡಿ ರಸ್ತೆ ಮಧ್ಯದಲ್ಲಿ ತಗ್ಗುಗಳನ್ನು ಮುಚ್ಚಿಸಬೇಕು ಎಂದು ಒತ್ತಾಯಿಸಿದರು.

j3tvkannada
ತಾಲ್ಲೂಕು ಪಂಚಾಯಿತ್ ಕಾರ್ಯನಿರ್ವಾಹಕ ಅಧಿಕಾರಿ ಮಡುಗಿನ ಬಸಪ್ಪನವರು ಮಾತನಾಡಿ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡ ಇಲಾಖೆ, ಬಿ.ಸಿ.ಎಂ. ಇಲಾಖೆ, ಅಲ್ಪಸಂಖ್ಯಾತರ ಇಲಾಖೆಯ ವಿದ್ಯಾಥಿ /ವಿದ್ಯಾರ್ಥಿನಿಯರ ವಸತಿ ನಿಲಯಗಳ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು ವಿದ್ಯಾರ್ಥಿಗಳು ವಸತಿ ನಿಲಯಕ್ಕೆ ಆಗಮಿಸುವ ಮೊದಲೇ ನಿಲಯಗಳ ಕಿಟಕಿ ಬಾಗಿಲು ಸಮರ್ಪಕವಾಗಿ ಸ್ವಚ್ಚತೆ ಕಾಪಡಿಕೊಳ್ಳಿ, ಶಾಲೆಗಳಲ್ಲಿನ ಸ್ವಚ್ಚತೆ ಕಾಪಾಡಕೊಳ್ಳಿ ಎಂದು ನಿಲಯಪಾಲಕರಿಗೆ ಶಾಲೆಯ ಮುಖ್ಯಸ್ಥರಿಗೆ ತಿಳಿಸಿದರು. ಕ್ಷೇತ್ರ ಶಿಕ್ಷಣಾಧಿಕರಿ ಡಾ. ಐ.ಅರ್. ಅಕ್ಕಿಯವರು ಮಾತನಾಡಿ ಎಲ್ಲಾ ಶಾಲೆಗಳ ಶೌಚಾಲಯಗಳನ್ನು ಸ್ವಚ್ಚ ಪಡಿಸಲಾಗಿದೆ ಎಂದರು.
ರಾಜಾಪುರದಲ್ಲಿ 2 ಎಕರೆ ಜಮೀನು ನೀಡಲು ಖಾಸಗಿ ವ್ಯಕ್ತಿಯೊಬ್ಬರು ಮುಂದೆ ಬಂದಿದ್ದಾರೆ. ಎಂದು ಸಭೆಯಲ್ಲಿ ತಿಳಿಸಿದರು. ಪಶುಸಂಗೋಪನಾ ಇಲಾಖೆಯ ಎ.ಡಿ. ಭಾಷಾ ಅವರು ಮಾತನಾಡಿ ತಾಲೂಕಿನಾದ್ಯಂತ ಕಾಲುಬಾಯಿ ಲಸಿಕೆ ಕಾರ್ಯಕ್ರಮ ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು. ತೋಟಗಾರಿಕೆ ಇಲಾಖೆಯ ಎ.ಡಿ. ಹನುಮಪ್ಪನಾಯಕ ಮಾತನಾಡಿ ಶಾಲೆಯ ಆವರಣದಲ್ಲಿ ಅಗತ್ಯ ಜಾಗವಿದ್ದಲ್ಲಿ ತೋಟಗಾರಿಕೆ ಇಲಖೆಯಿಂದ ಸಸಿಗಳನ್ನು ನೆಟ್ಟು ಸೌಂದರ್ಯ ಗೊಳಿಸಲಾಗುವುದು ಎಂದು ತಿಳಿಸಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ. ಎ.ಇ.ಇ. ವಿನಾಯಕರವರು ಜೆ.ಜೆ.ಎಂ. ಅಡಿ ಕಾಮಗಾರಿ ಮಾಡಿದಾಗ ಪೈಪ್ ಲೈನ್ ಸೋರಿಕೆಯಾಗುವುದನ್ನು ಅರಿತುಕೊಳ್ಳುವ ಸಲುವಾಗಿ ರಸ್ತೆಯಲ್ಲಿ ತಗೆದ ಗುಂಡಿ ಮುಚ್ಚುವಲ್ಲಿ ಕೊಂಚ ವಿಳಂಬವಾಗುತ್ತಿದೆ ಎಂದು ತಿಳಿಸಿದರು. ಪ್ಲೋರೈಡ್ ಅಂಶ ಹೆಚ್ಚಿರುವ ಭಾಗದಲ್ಲಿ ಜನರು ಶುದ್ಧ ಕುಡಿಯುವ ನೀರಿನ ಘಟಕಗಳ ನೀರನ್ನು ಬಳಕೆ ಮಾಡಲು ಸೂಚನೆ ನೀಡಲಾಗಿದೆ. ತಾಲೂಕಿನಲ್ಲಿ 152 ಶುದ್ದ ಕುಡಿಯುವ ನೀರಿನ ಘಟಕಗಳು ಕೆಲಸ ನಿರ್ವಹಿಸುತ್ತವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಕ್ಷರ ದಾಸೋಹದ ಅಧಿಕಾರಿ ಶ್ರೀಧರ ಮೂರ್ತಿ ಮಾತನಾಡಿ ಮಾಹಿತಿ ನೀಡಿದರು. ಮುಖ್ಯಾಧಿಕಾರಿ ಜಯಣ್ಣ.ಕೆ ಹಿಂದುಳಿದ ವರ್ಗಗಳ ಅಧಿಕಾರಿ ವೀರಭದ್ರಯ್ಯ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎನ್.ಕೆ. ವೆಂಕಟೆಶ್, ಶಿಶು ಅಭಿವೃದ್ದಿ ಅಧಿಕಾರಿ ಲಾಲಾ ಸಾಹೇಬು, ಕ್ಷೇತ್ರ ಸಮನ್ವಯ ಅಧಿಕಾರಿ ಶರಣಬಸಪ್ಪ, ಕರಿಶೆಟ್ಟು ಜಿಲ್ಲಾ ಪಂಚಾಯಿತಿ ಅಧಿಕಾರಿ ಕೊಟ್ರೇಶಿ, ಪ.ವರ್ಗ ಅಧಿಕಾರಿ ರಂಗನಾಥ, ಪಿ.ಡಬ್ಲ್ಯೂ.ಡಿ. ಅಧಿಕಾರಿಗಳು ಮತ್ತು ಪಿ.ಡಿ.ಓಗಳು ಉಪಸ್ಥಿತರಿದ್ದರು. ಕೃಷಿ ಇಲಖೆ ಅಧಿಕಾರಿ ಮಂಜುನಾಥ ರೆಡ್ಡಿ ಇಲಾಖೆಯ ಮಾಹಿತಿ ಹಾಗೂ ಬಿತ್ತನೆಬೀಜ, ಗೊಬ್ಬರ ಹಾಗೂ ಮಳೆ ಮಾಹಿತಿ ನೀಡಿದರು.