
ವಿಜಯಪುರ(ಇಂಡಿ):ಪ್ರತೀ ವರ್ಷ ಜೂನ್ 12 ರಂದು ಬಾಲ ಕಾರ್ಮಿಕ ವಿರೋಧಿ ದಿನವನ್ನು ಆಚರಣೆ ಮಾಡಲಾಗುತ್ತದೆ. ಅದರಂತೆ ಜೂನ್ 12 ರಂದು ವಿಶ್ವ “ಬಾಲಕಾರ್ಮಿಕ ವಿರೋಧಿ” ದಿನ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು,

j3tvkannada.in
ಬಾಲ ಕಾರ್ಮಿಕ ಪದ್ಧತಿಯ ವಿರುದ್ದ ಜಾಗೃತಿ ಮೂಡಿಸುವುದು ಮತ್ತು ಈ ಪಿಡುಗನ್ನು ಸಂಪೂರ್ಣವಾಗಿ ತೊಡೆದು ಹಾಕುವ ಉದ್ದೇಶದಿಂದ ಈ ಯೋಜನೆಯನ್ನು ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು 2002 ರಲ್ಲಿ ಈ ದಿನವನ್ನು ಪ್ರಥಮವಾಗಿ ಆಚರಿಸಿತು.
ಕಾರ್ಯಕ್ರಮವನ್ನುದ್ದೇಶಿಸಿ ಹಿರಿಯ ದಿವಾಣಿ ನ್ಯಾಯಾಧೀಶ ಕೊಟ್ಟೆಪ್ಪ ಕಾಂಬಳೆ ಮಾತನಾಡಿ, ಪ್ರತೀ ವರ್ಷ ಜೂನ್ 12 ರಂದು ಬಾಲ ಕಾರ್ಮಿಕ ವಿರೋಧಿ ದಿನ ಆಚರಣೆ ಮಾಡಲಾಗುತ್ತದೆ.
ನ್ಯಾಯವಾದಿ ಡಿ.ವೈ. ಮೇಡೆಗಾರ ಮಾತನಾಡಿ, ಮಗುವಿನ ವಯಸ್ಸು, ದೈಹಿಕ ಅಥವಾ ಮಾನಸಿಕ ಸಾಮರ್ಥ್ಯಕ್ಕೆ ಸೂಕ್ತವಲ್ಲದ ಕೆಲಸವನ್ನು ಮಾಡಿಸುವುದನ್ನು ಬಾಲ ಕಾರ್ಮಿಕ ಪದ್ಧತಿ ಎಂದು ಹೇಳಲಾಗುತ್ತದೆ. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಸಂಘ-ಸಂಸ್ಥೆಗಳಲ್ಲೂ ಹಾಗೂ ವೈಯಕ್ತಿಕವಾಗಿಯೂ ಯಾರೂ ಸಹ ಕೆಲಸಕ್ಕೆ ಬಳಸಿಕೊಳ್ಳಬಾರದೆಂದು ಕಾನೂನಿದ್ದು ಅಂತದ್ದು ಕಂಡು ಬಂದರೆ ಅವರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳಲು ಅವಕಾಶವಿದೆ ಎಂದರು.
ಕಿರಿಯ ದಿವಾಣಿ ನ್ಯಾಯಾಧೀಶ ಸುನಿಲ್ ಕುಮಾರ, ಹೆಚ್ಚುವರಿ ದಿವಾಣಿ ನ್ಯಾಯಾಧೀಶ ವಿಕಾಸ ದಳವಾಯಿ ವೇದಿಕೆಯಲ್ಲಿದ್ದರು. ನ್ಯಾಯವಾದಿಗಳಾದ ಎ.ಎ.ಗಜಾಕೊಶ, ಎನ್.ಕೆ.ನಾಡಪುರೊಹಿತ, ಎಸ್.ಆರ್.ಬಿರಾದಾರ ಮತ್ತು ಸಹಾಯಕ ಸರ್ಕಾರಿ ಅಭಿಯೋಜಕರಾದ ರಾಖಿ ಕಟ್ಟಿಮನಿ, ಐ.ಕೆ.ಗಚ್ಚಿನಮಾಲ, ಮಲ್ಲೇಶ್ ಯಂಬತ್ನಾಳ ಮತ್ತು ಕಾರ್ಮಿಕ ಇಲಾಖೆ ದತ್ತು ದೇವರಮನಿ ಭಾಗವಹಿಸಿದ್ದರು.