
ಧಾರವಾಡ: ನಾಡಿನಾದ್ಯಂತ ವರುಣನ ಆರ್ಭಟ ಮುಂದುವರೆದಿದ್ದು, ಧಾರವಾಡ ಜಿಲ್ಲೆಯಲ್ಲೂ ನಿರಂತರವಾಗಿ ಮಳೆ ಸುರಿಯುತ್ತಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಸತತ ಮಳೆಯಿಂದಾಗಿ ಜಿಲ್ಲೆಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

3tvkannada.in
ಭಾರೀ ಮಳೆ ಪ್ರಯುಕ್ತ ಅಂಗನಾಡಿ ಮತ್ತು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭುವರು ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆ ಧಾರವಾಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕಳೆದೆರೆಡು ದಿನಗಳಿಂದ ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಯಾವುದೇ ಸಂಭಾವ್ಯ ಅಪಾಯಕಾರಿ ಸನ್ನಿವೇಶನವನ್ನು ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಇನ್ನು ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಧಾರವಾಡ ಜಿಲ್ಲೆಗೆ ರೆಡ್ ಅಲರ್ಟ್ ಮುಂದುವರೆಸಲಾಗಿದೆ.
ಇನ್ನು ಧಾರವಾಡ ಜಿಲ್ಲೆಯಾದ್ಯಂತ ಯಾವುದೇ ಅಪಾಯಕಾರಿ ಸನ್ನಿವೇಶವನ್ನು ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಈಗಾಗಲೇ ಹಿರಿಯ ಅಧಿಕಾರಿಗಳು ನಗರ ಮತ್ತು ಗ್ರಾಮೀಣ ಭಾಗದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಂಭವನೀಯ ಅಪಾಯಕಾರಿ ಪರಿಸ್ಥಿತಿಗಳನ್ನು ಅವಲೋಕಿಸಿದ್ದಾರೆ. ಜಿಲ್ಲೆಯ ನವಲಗುಂದ ತಾಲೂಕಿನಲ್ಲೂ ನಿರಂತರವಾಗಿ ಮಳೆಯಾಗುತ್ತಿದ್ದು, ಇಂಗಳಹಳ್ಳಿ ಗ್ರಾಮಕ್ಕೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದೆ. ತಾಲೂಕಿನ ಅನೇಕ ಗ್ರಾಮಗಳು ಭಾರೀ ಮಳೆಯಿಂದಾಗಿ ನಲುಗಿವೆ.