
ರಾಯಚೂರು: ರಾಘವೇಂದ್ರ ಸ್ವಾಮಿ ಮಠ ಹಾಗೂ ಉತ್ತರಾದಿ ಮಠದ ನಡುವಿನ ದಶಕಗಳ ವಿವಾದಕ್ಕೆ ಸೌಹಾರ್ದ ಮಾತುಕತೆ ಮೂಲಕ ಶ್ರೀ ಹಾಡಲು ಉಭಯ ಮಠಗಳ ಶ್ರೀಗಳು ಮುಂದಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಆನೆಗೊಂದಿಯ ನವ ವೃಂದಾವನದ ಪೂಜೆ ವಿವಾದವನ್ನು ಸಾಮರಸ್ಯದಿಂದ ಪರಿಹರಿಸಿಕೊಳ್ಳುವುದಾಗಿ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹಾಗೂ ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ಘೋಷಿಸಿದ್ದಾರೆ.

j3tvkannada.in
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು, ರಾಯರ ಮಠ ಹಾಗೂ ಉತ್ತರಾದಿ ಮಠದ ನಡುವೆ ಒಂದು ಸೌಹಾರ್ದ ವಾತಾವರಣ ಏರ್ಪಟ್ಟಿದೆ. ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಎರಡು ಮಠಗಳ ನಡುವೆ ಇರುವ ವಿವಾದ ಕುರಿತು ಸಾಮರಸ್ಯದ ಪರಿಹಾರಕ್ಕೆ ಇಂದು ಮಾತುಕತೆ ನಡೆದಿದೆ ಎಂದು ತಿಳಿಸಿದ್ದಾರೆ.
ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ಮಾತನಾಡಿ, ಉತ್ತರಾದಿ ಮಠ ಹಾಗೂ ರಾಘವೇಂದ್ರ ಮಠದ ನಡುವಿನ ಅನೇಕ ದಿನಗಳ ವ್ಯಾಜ್ಯಕ್ಕೆ ಪರಿಹಾರ ನೀಡಲು ವಿಶೇಷ ಪ್ರಯತ್ನ ನಡೆಯುತ್ತಿದೆ. ಶೀಘ್ರದಲ್ಲಿ ಗುರುಗಳ ಕೃಪೆಯಿಂದ ಎಲ್ಲರೂ ಒಗ್ಗಟ್ಟಿನಿಂದ ಇರುವ ಕಾಲ ಬರಲಿದೆ. ನಾವಿಬ್ಬರೂ ಪ್ರೀತಿ, ವಿಶ್ವಾಸದಿಂದ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.