
ಬಾಗಲಕೋಟ: ಜಿಲ್ಲೆಯಲ್ಲಿ ಐದು ವರ್ಷದೊಳಗಿನ ಮಕ್ಕಳಲ್ಲಿ ಕಂಡುಬರುವ ಅತಿಸಾರ ಭೇದಿ ತಡೆಗೆ ಜೂನ್ ೧೬ ರಿಂದ ಜುಲೈ ೩೧ ವರೆಗೆ ಆಂದೋಲನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಹೇಳಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಅತಿಸಾರಭೇದಿ ಮತ್ತು ದಡಾರ ಮತ್ತು ರುಬೆಲ್ಲ ನಿರ್ಮೂಲನೆ ಕುರಿತು ಜರುಗಿದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಹುಟ್ಟಿದ ಮಗುವಿನಿಂದ ಹಿಡಿದು ೫ ವರ್ಷದೊಳಗಿನ ಮಕ್ಕಳಲ್ಲಿ ಕಂಡುಬರುತ್ತಿದ್ದು, ಯಾವುದೇ ಮಕ್ಕಳು ಇದರಿಂದ ಮರಣ ಹೊಂದದಂತೆ ಪರಿಣಾಮಕಾರಿ ಚಿಕಿತ್ಸೆಗೆ ಓ.ಆರ್.ಎಸ್ ಮತ್ತು ಝಿಂಕ್ ಮಾತ್ರೆ ವಿತರಣೆಗೆ ಕ್ರಮವಹಿಸಲು ಸೂಚನೆ ನೀಡಿದರು.

j3tvkannada
ಜಿಲ್ಲೆಯಲ್ಲಿ ೫ ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪರಿಣಾಮಕಾರಿ ಚಿಕಿತ್ಸೆಗೆ ಓ.ಆರ್.ಎಸ್ ಮತ್ತು ಝಿಂಕ್ ಮಾತ್ರೆ ವಿತರಣೆ ಮಾಡಲಾಗುತ್ತಿದ್ದು, ಜಿಲ್ಲೆಯಲ್ಲಿ ಲಭ್ಯವಿರುವ ೮೩೧೮೫ ಓ.ಆರ್.ಎಸ್ ಮತ್ತು ೬೫೨೩೮೦ ಚಿಂಕ್ ಮಾತ್ರಗಳನ್ನು ಜಿಲ್ಲೆಯ ಆಯಾ ತಾಲೂಕಿನ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ವಿತರಣೆಗೆ ಕ್ರಮವಹಿಸಬೇಕು. ಇದರ ಜೊತೆಗೆ ಕುಡಿಯುವ ನೀರು ಶುಚಿತ್ವ ಇರಬೇಕು. ಆಹಾರ ಸೇವನೆ ಮುಂಚೆ ಕೈಗಳನ್ನು ಸುಚಿಗೊಳಿಸಿಕೊಳ್ಳುವುದು ಮುಖ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಪ್ರಮಾಣದಲ್ಲಿ ಶಾಲೆ, ಅಂಗನವಾಡಿ ಜನ ಸಮುದಾಯದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತಿಳಿಸಿದರು.
ವಿಶ್ವ ಆರೋಗ್ಯ ಸಂಸ್ಥೆಯ ಸರ್ವೇಲೆನ್ಸ್ ಅಧಿಕಾರಿ ಮುಕುಂದ ಗಲಗಲಿ ದಡಾರ ಮತ್ತು ರುಬೆಲ್ಲಾ ನಿರ್ಮೂಲನೆ ಕುರಿತು ಮಾತನಾಡಿ ಎಂ.ಆರ್-೧ ಮತ್ತು ಎಂ.ಆರ್-೨ ಲಸಿಕಾ ವಂಚಿತ ಮಕ್ಕಳನ್ನು ಹುಡುಕಿ, ಅವರಿಗೆ ದಡಾರ ಮತ್ತು ರುಬೆಲ್ಲಾ ಲಸಿಕೆಯನ್ನು ಹಾಕಲಾಗುತ್ತದೆ. ಜ್ವರ ಮತ್ತು ಗಂಧೆ ಪ್ರಕರಣಗಳು ವರದಿಯಾಗಿದ್ದು, ಎಲ್ಲ ತಾಲೂಕಿನ ಪ್ರಕರಣಗಳ ವರದಿ ಮಾಡಲು ತಾಲೂಕಾ ಮಟ್ಟದ ಅಧಿಕರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ೪೬ ಸಂಶಯಾತ್ಮಕ ಪ್ರಕರಣಗಳಲ್ಲಿ ೪ ಪ್ರಕರಣಗಳು ದೃಡಪಟ್ಟಿವೆ. ದೃಡಪಟ್ಟ ಪ್ರದೇಶಗಳಲ್ಲಿ ವಿಶೇಷ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ ಡಿ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ದಯಾನಂದ ಕರೇನ್ನವರ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಕುಸುಮಾ ಮಾಗಿ, ಜಿಲ್ಲಾ ಆಯುಷ ಅಧಿಕಾರಿ ಡಾ.ಶೇಖರಯ್ಯ ಮಠ ಸೇರಿದಂತೆ ಆಯಾ ತಾಲೂಕಿನ ವೈದ್ಯಾಧಿಕಾರಿಗಳು ಉಪಸ್ಥಿರಿದ್ದರು.