
ಬಾಗಲಕೋಟೆ: ಮನೆಯ ಶೆಡ್ನಲ್ಲಿ ಮಲಗಿದ್ದ ಹಸುವಿನ ಕೆಚ್ಚಲು ಕತ್ತರಿಸಿ ದುರುಳರು ವಿಕೃತಿ ಮೆರೆದ ಘಟನೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಭರಮಪ್ಪ ಕುರಿಯವರು ಸಾಕಿರುವ ಹಸುವಿನ ಕೆಚ್ಚಲನ್ನು ದುರುಳರು ಶುಕ್ರವಾರ ಕತ್ತರಿಸಿದ್ದಾರೆ. ಮಧ್ಯರಾತ್ರಿ ಹಸುವಿಗೆ ಮೇವು ಹಾಕಿ ಮನೆಯವರು ತೆರಳಿದ್ದಾರೆ. ಬೆಳಗಿನ ಜಾವ ಘಟನೆ ನಡೆದಿದ್ದು, ಹಸುವಿನ ಕೆಚ್ಚಲಿನಿಂದ ರಕ್ತಸ್ರಾವವಾಗುತ್ತಿರುವುದನ್ನು ಗಮನಿಸಿ ಮನೆಯವರು ಪಶು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.

j3tvkannada
ವೈದ್ಯರು ಹಸುವಿಗೆ ಚಿಕಿತ್ಸೆ ನೀಡಿದ್ದು, ಆರೋಗ್ಯ ಸುಧಾರಿಸಿದೆ. ಕುಳಗೇರಿ ಉಪ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹಸುವಿನ ಮಾಲೀಕ ಭರಮಪ್ಪ, ಒಬ್ಬರಿಂದ ಇಂತಹ ಕೃತ್ಯ ಮಾಡಲು ಸಾಧ್ಯವಿಲ್ಲ. ಹೀಗಾಗಿ ನಾಲ್ಕೈದು ಜನ ಸೇರಿ ಕೃತ್ಯ ನಡೆಸಿರಬಹುದು. ಮೂಕ ಪ್ರಾಣಿಗಳಿಗೆ ಹೀಗೆ ನೋವು ನೀಡುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದ್ದಾರೆ. ಗ್ರಾಮದ ಜನರು ಹಸುವಿನ ಸ್ಥಿತಿಗೆ ಮರುಗಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.