
ಶಿವಮೊಗ್ಗ:ಮುಂಗಾರು ಮಳೆ ಆರಂಭವಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆಗುಂಬೆ ಘಾಟಿಯಲ್ಲಿ ಜೂನ್ 15ರಿಂದ ಸೆಪ್ಟೆಂಬರ್ 30ರವರೆಗೆ ಘನ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಭಾರೀ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಆದೇಶಿಸಲಾಗಿದೆ.
ಭಾರೀ ಮಳೆಯಿಂದಾಗಿ ಮತ್ತು ಘನ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವ ಇರುವುದರಿಂದ ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳನ್ನು ನಿಷೇಧಿಸಿ, ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶಿಸಿಲಾಗಿದೆ.

j3tvkannada.in
ಸದರಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ, ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಉಲ್ಲೇಖ (1)ರ ಪತ್ರದಲ್ಲಿ ಕೋರಲಾಗಿದೆ. ಈ ವಿಚಾರದಲ್ಲಿ ಉಲ್ಲೇಖ(2)ರಂತೆ ಪೊಲೀಸ್ ಇಲಾಖೆಯಿಂದ ವರದಿ ಪಡೆಯಲಾಗಿರುತ್ತದೆ.
ಸದರಿಯವರ ಕೋರಿಕೆ ಹಾಗೂ ಪೊಲೀಸ್ ಇಲಾಖಾ ವರದಿಯನ್ವಯ ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989ರ ಕಲಂ 221(ಎ) (2) & (5) ರ ಅನ್ವಯ, ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ ಮೂಲಕ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಘನ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿಯವರು ಆದೇಶವನ್ನು ಹೊರಡಿಸಿದ್ದಾರೆ.