
ಹುಬ್ಬಳ್ಳಿ:ಅಂಕೋಲಾ ರೈಲು ಮಾರ್ಗಕ್ಕೆ ಸಂಬಂಧಿಸಿ ಎಲ್ಲಾ ಪ್ರಕ್ರಿಯೆಗಳು ಧನಾತ್ಮಕವಾಗಿ ಸಾಗಿದ್ದು, ಎರಡ್ಮೂರು ತಿಂಗಳಲ್ಲಿ ಸ್ಪಷ್ಟ ರೂಪವನ್ನು ಪಡೆದುಕೊಳ್ಳಲಿದೆ ಎಂದು, ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

3tvkannada.in/
ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಹುಬ್ಬಳ್ಳಿ – ಅಂಕೋಲಾ ಯೋಜನೆಗೆ ಅರಣ್ಯ ಇಲಾಖೆಯಿಂದ ಕ್ಲಿಯರೆನ್ಸ್ ಸಿಕ್ಕಿದೆ. ಡಿಪಿಆರ್ ಕೂಡ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಪರ – ವಿರೋಧ ಚರ್ಚೆಗಳು ನಡೆದಿವೆ, ಇದನ್ನು ಅಲ್ಲಿನ ಸಂಸದ ಕಾಗೇರಿ ಅವರು ನಿಭಾಯಿಸುತ್ತಿದ್ದಾರೆ.
15 ದಿನಗಳೊಳಗೆ ಭೇಟಿ ನೀಡಿ ವಿರೋಧಿಗಳ ಮನವೊಲಿಸುವ ಪ್ರಯತ್ನ ಮಾಡುತ್ತೇನೆ, ಎಂದು ತಿಳಿಸಿದರು. ಧಾರವಾಡ – ಬೆಳಗಾವಿ ಯೋಜನೆಗೆ ಅಡ್ಡಿಯಾಗಿದ್ದ ಭೂಸ್ವಾಧೀನ ಅಡಚಣೆಯನ್ನು ರಾಜ್ಯ ಮೂಲ ಸೌಕರ್ಯ ಖಾತೆ ಸಚಿವ ಎಂ.ಬಿ.ಪಾಟೀಲ ನಿವಾರಿಸಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಪ್ರಕ್ರಿಯೆ ಸರಾಗವಾಗಿದೆ ಎಂದರು.
ನನ್ನ ಅವಧಿಯಲ್ಲಿಯೇ ಯೋಜನೆ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಹೊಸ ವಿಮಾನ ನಿಲ್ದಾಣವನ್ನು ಬೆಂಗಳೂರಿನಿಂದ 150 ಕಿ.ಮೀ ದೂರದಲ್ಲಿ ನಿರ್ಮಿಸುವ ಪ್ರಸ್ತಾಪವಿದೆ. ಇದರಿಂದ ಹುಬ್ಬಳ್ಳಿ ನಿಲ್ದಾಣ ಇನ್ನೂ 100 ಪಟ್ಟು ಅಭಿವೃದ್ಧಿಯಾಗಲಿದೆ. ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.