
ರಾಯಚೂರು: ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದು, ಜಲಾಶಯದಿಂದ ಕೃಷ್ಣಾ ನದಿಗೆ ಹಂತ ಹಂತವಾಗಿ ನೀರು ಬಿಡುಗಡೆ ಮಾಡಲಾಗುತ್ತಿದೆ.

j3tvkannada
ಈ ಹಿನ್ನೆಲೆ ರಾಯಚೂರು ಜಿಲ್ಲೆಯಲ್ಲಿ ಕೃಷ್ಣಾ ನದಿ ಪಾತ್ರದಲ್ಲಿ ಅಲರ್ಟ್ ಘೋಷಿಸಲಾಗಿದೆ. ನದಿ ಪಾತ್ರಕ್ಕೆ ಯಾರೂ ತೆರಳದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ. ಸದ್ಯ ಜಲಾಶಯದಿಂದ 29,226 ಕ್ಯೂಸೆಕ್ನಷ್ಟು ನೀರನ್ನು 7 ಗೇಟ್ಗಳ ಮೂಲಕ ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ನಾರಾಯಣಪುರ ಜಲಾಶಯಕ್ಕೆ 30,000 ಕ್ಯೂಸೆಕ್ ಒಳಹರಿವು ಇದ್ದು, 85.41% ರಷ್ಟು ಭರ್ತಿಯಾಗಿದೆ.
ಗರಿಷ್ಠ ಮಟ್ಟ 492.25 ಮೀಟರ್ನಲ್ಲಿ 491.15 ಮೀಟರ್ ತಲುಪಿದೆ. 33.313 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 28.45 ಟಿ.ಎಂ.ಸಿ ನೀರು ಸಂಗ್ರಹವಾಗಿದೆ. ಒಳಹರಿವು ಹೆಚ್ಚಾದಂತೆ ಹೆಚ್ಚು ಪ್ರಮಾಣದ ನೀರನ್ನು ಕೃಷ್ಣಾ ನದಿಗೆ ಹರಿಸುವ ಸಾಧ್ಯತೆ ಹಿನ್ನೆಲೆ ರಾಯಚೂರು ಜಿಲ್ಲಾಡಳಿತವು, ಜನ ಜಾನುವಾರುಗಳೊಂದಿಗೆ ನದಿ ಬಳಿ ಹೋಗದಂತೆ ಎಚ್ಚರಿಕೆ ನೀಡಿದೆ.