
ದಾವಣಗೆರೆ:ವಿದ್ಯುತ್ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವನ್ನು ಮಾಡಲಾಗುತ್ತದೆ. ಹಾಗೆಯೇ ಇಂದು (ಜೂನ್ 14) ರಂದು ದಾವಣಗೆರೆ ನಗರದ ಹಲವು ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

j3tvkannada.in
ಹಾಗಾದರೆ ಇದಕ್ಕೆ ಕಾರಣ ಏನು ಹಾಗೂ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ. ವಿದ್ಯುತ್ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ.
ನಗರದ ಪಿ.ಜೆ.ಫೀಡರ್ನಲ್ಲಿ ತುರ್ತು ಕಾರ್ಯ ಹಮ್ಮಿಕೊಂಡಿರುವ ಹಿನ್ನೆಲೆ ಇಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೊಸ ಪೊಲೀಸ್ ಕ್ವಾಟ್ರಸ್, ಅರುಣ ಚಿತ್ರಮಂದಿರ, ವಿಶ್ವಾಸ ಅಪಾರ್ಟಮೆಂಟ್, ಎಂ.ವಿ ಪಾರ್ಕ್, ರಾಮ್ & ಕೊ ಸರ್ಕಲ್, ಪಿ.ಜೆ. ಬಡಾವಣೆ, ಎಂ.ಸಿ.ಸಿ.ಎ ಬ್ಲಾಕ್ 1, 2ನೇ, 3ನೇ ಮೇನ್ ಸೇರಿದಂತೆ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ಮಾಹಿತಿಯನ್ನು ನೀಡಿದೆ.