
ಗದಗ: ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಲಕ್ಷ್ಮೇಶ್ವರ ತಾಲೂಕಿನ ಮಾಡಳ್ಳಿ ಬಳಿ ಸೇತುವೆಯೊಂದು ಕೊಚ್ಚಿ ಹೋಗಿ ಮಾಡಳ್ಳಿ – ಗುಂಜಳ ರಸ್ತೆ ಸಂಚಾರ ಸ್ಥಗಿತಗೊಂಡಿದೆ.

j3tvkannada
ಬಿಡದೇ ಸುರಿಯುತ್ತಿರುವ ಮಳೆಗೆ ಕಲ್ಲಿನ ಹಳೆಯ ಸೇತುವೆ ಕೊಚ್ಚಿ ಹೋಗಿದ್ದು, ಮಾಗಡಿ, ಮಾಡಳ್ಳಿ, ಗುಂಜಳದಿಂದ ಕುಂದಗೋಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇದೀಗ ರೈತರು, ಪ್ರಯಾಣಿಕರು ಪರದಾಡುವಂತಾಗಿದೆ.
ಜಿಲ್ಲೆಯಲ್ಲಿ ಹಳ್ಳ-ಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ರೋಣ ತಾಲೂಕಿನ ಬೆಳವಣಕಿ ಗ್ರಾಮದ ಬಳಿ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ತುಂಬಿ ಹರಿಯುತ್ತಿರುವ ಬೆಳವಣಕಿ ಬೂದಿಹಳ್ಳದ ನೀರಿನ ರಭಸಕ್ಕೆ ರಸ್ತೆಗಳು ಸಂಪೂರ್ಣಕೊಚ್ಚಿ ಹೋಗಿವೆ.
ಹರಿಯುವ ನೀರಲ್ಲಿ ಜನರು ಹುಚ್ಚಾಟ ಮಾಡುತ್ತಿದ್ದು, ನೀರಿನ ಸೆಳೆತದ ನಡುವೆಯೂ ಅತ್ತಿಂದಿತ್ತ ಸಂಚರಿಸುತ್ತಿದ್ದಾರೆ. ಕೊಚ್ಚಿ ಹೋದ ರಸ್ತೆಯಿಂದ ಬೆಳವಣಕಿ, ಬಳಗಾನೂರ ಗದಗ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಆಗಿದೆ. ಮೇಲ್ಸೇತುವೆ ಮಾಡುವಂತೆ ಸಾರ್ವಜನಿಕರು ಸಾಕಷ್ಟು ಮನವಿ ಮಾಡಿದರೂ ಸ್ಪಂದಿಸದೇ ಇರುವ ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.