
ಕೊಡಗು: ಕರ್ನಾಟಕ ಸರ್ಕಾರ ಎಲ್ಲಾ ಜಿಲ್ಲೆಗಳಲ್ಲಿಯೂ, ಪ್ರವಾಸಿಗರ ಸುರಕ್ಷತೆಯ ನಿಟ್ಟಿನಲ್ಲಿ, ರೆಸಾರ್ಟ್, ಹೋಂ ಸ್ಟೇಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದೆ. ಕೊಡಗು ಜಿಲ್ಲೆಯಲ್ಲಿ, ಪ್ರವಾಸಿಗರ ಸುರಕ್ಷತೆ ಮತ್ತು ಭದ್ರತೆಗೆ ಒತ್ತು ನೀಡಲಾಗಿದ್ದು, ನೋಂದಣಿ ಆಗದಿರುವ ಹೋಂ ಸ್ಟೇಗಳಿಗೆ ಖಡಕ್ ಸೂಚನೆ ನೀಡಲಾಗಿದೆ.

J3Tvkannada.in
ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾರವರು ಈಗಾಗಲೇ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ, ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆ ನಿರ್ವಹಿಸುವ ಕುರಿತು ಹೋಟೆಲ್, ರೆಸಾರ್ಟ್, ಹೋಂ-ಸ್ಟೇ ಹಾಗೂ ಟ್ರಾವೆಲ್ಸ್ ಏಜೆನ್ಸಿ ಪ್ರತಿನಿಧಿಗಳ ಜತೆ ಸಭೆ ನಡೆಸಿರುವುದಾಗಿ ತಿಳಿಸಿದ್ದಾರೆ. ಜಿಲ್ಲಾಡಳಿತವು ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗಾಗಿ ಪೊಲೀಸ್ ಇಲಾಖೆಯೊಂದಿಗೆ, ಕೈ ಜೋಡಿಸಿ, ಬೇಕಾದ ಸುರಕ್ಷತಾ ಕ್ರಮಗಳನ್ನು ಕೈಗೊಳುತ್ತೇವೆ, ಎಂದು ಹೇಳಿದ್ದಾರೆ.
ಜಿಲ್ಲೆಯ ಪ್ರವಾಸಿ ತಾಣಗಳನ್ನು ಪ್ರವಾಸಿ ಸ್ನೇಹಿಯಾಗಿರುವಂತೆ ಕ್ರಮವಹಿಸಲು ಉಪನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಜಿಲ್ಲೆಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ, ಮುಖ್ಯಾಧಿಕಾರಿಗಳಿಗೆ, ತಹಶೀಲ್ದಾರ್ಗೆ ಹಾಗೂ ಹೋಂ-ಸ್ಟೇ, ರೆಸಾರ್ಟ್, ಅಸೋಸಿಯೇಷನ್ ಹಾಗೂ ಟೂರ್ ಅಂಡ್ ಟ್ರಾವೆಲ್ಸ್ ಅಪರೇಟರ್ಗಳಿಗೆ ನಿರ್ದೇಶನಗಳನ್ನು ನೀಡಿದರು.