
ಯಾದಗಿರಿ: ಬೆಂಗಳೂರಿನಲ್ಲಿ ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಜನ ಸಾವನ್ನಪ್ಪಿದ ಪ್ರಕರಣಕ್ಕೆ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

j3tvkannada
ಯಾದಗಿರಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಆರೋಗ್ಯ ಆವಿಷ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಈ ವೇಳೆ, ನಮ್ಮ ನಿಲುವುಗಳಿಗೆ, ನಮ್ಮ ನಿರೀಕ್ಷೆಗಳಿಗೆ ವಿರುದ್ಧವಾಗಿ ಕೆಲವು ಘಟನೆಗಳು ನಡೆಯುತ್ತವೆ. ಇಂತಹ ಘಟನೆ ನಡೆಯಬಾರದು, ದುರಂತಗಳು ಎಲ್ಲೂ ಸಂಭವಿಸಬಾರದು. ಯಾವುದೇ ಸರ್ಕಾರದಲ್ಲಿ ಈ ರೀತಿ ಆಗಬಾರದು ಎಂದಿದ್ದಾರೆ.
ದುರಂತಗಳು ನಡೆದು ಬಡವರು ಸಾಯಬಾರದು. ಆದರೆ ಒಂದೊಂದು ಸಾರಿ ನಾವು ತಪ್ಪು ಮಾಡದೇ ಹೋದರು ನಮ್ಮ ನಿರೀಕ್ಷೆಗಳಿಗೆ ವಿರುದ್ಧವಾಗಿ ಕೆಲವು ಘಟನೆಗಳು ನಡೆಯುತ್ತವೆ ಎಂದು ಹೇಳಿದ್ದಾರೆ. ಕಾಲ್ತುಳಿತದಲ್ಲಿ 11 ಜನ ಸತ್ತಿದ್ದಕ್ಕೆ ಬಿ.ಜೆ.ಪಿಯವರು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಅಂತ ಕೇಳಿದರು. ಹಾಗಾದ್ರೆ ಕುಂಭಮೇಳದಲ್ಲಿ ಸುಮಾರು 40- 50 ಜನ ಸತ್ರಲ್ಲಾ ಅದಕ್ಕೆ ಯಾರು ಹೊಣೆ ಬಿ.ಜೆ.ಪಿಯವರು ಬರೀ ಸುಳ್ಳು ಹೇಳ್ತಾರೆ, ಸುಳ್ಳೇ ಅವರ ಮನೆ ದೇವರು ಎಂದು ವ್ಯಂಗ್ಯವಾಡಿದ್ದಾರೆ.