
ಕಲಬುರಗಿ: ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ದಲಿತ ಸಿ.ಎಂ ಕೂಗು ನಿಂತಿದೆ. ಹೊಸ ಎಲೆಕ್ಷನ್ ಆದ ಮೇಲೆ ನೋಡೋಣ ಅಂತ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

j3tvkannada
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯ ದಲಿತ ಸಿ.ಎಂ ಕೂಗು ಕೇಳಿ ಬಂದಿಲ್ಲ. 2028ರ ಚುನಾವಣೆಯಲ್ಲಿ ಅದರ ಬಗ್ಗೆ ಗಂಭೀರ ಚರ್ಚೆ ಮಾಡೋಣ ಅಂತ ತಿಳಿಸಿದ್ದಾರೆ. ಇನ್ನು ನವೆಂಬರ್ ತಿಂಗಳಲ್ಲಿ ಸಿ.ಎಂ ಬದಲಾವಣೆ ಅಂತ ಎಚ್. ವಿಶ್ವನಾಥ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರ ಹೇಳಿಕೆಗೂ ನಮಗೂ ಸಂಬಂಧ ಇಲ್ಲ ಅವರು ನಮ್ಮ ಪಕ್ಷದವರಲ್ಲ. ನಮ್ಮ ಪಕ್ಷದವರು ಹೇಳಿದ್ರೆ ಅದಕ್ಕೆ ರಿಯಾಕ್ಟ್ ಮಾಡಬಹುದು, ಅವರ ಹೇಳಿಕೆಗೂ ನಮಗೂ ಯಾವ ಸಂಬಂಧವೂ ಇಲ್ಲ ಎಂದಿದ್ದಾರೆ.
ಇದೇ ವೇಳೆ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಇಲ್ಲ ಎಂಬ ಬಿ.ಜೆ.ಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿ, ಕಳೆದ 2 ವರ್ಷಗಳಿಂದ ಅವರು ಇದನ್ನೇ ಹೇಳ್ತಿದ್ದಾರೆ. ಇನ್ನೂ 3 ವರ್ಷ ಬಿ.ಜೆ.ಪಿಯವರು ಗ್ಯಾರಂಟಿಯಿಂದ ಅಭಿವೃದ್ಧಿ ಇಲ್ಲ ಎಂದು ಹೇಳ್ತಾರೆ. ಗ್ಯಾರಂಟಿಯಿಂದ ಯಾವ ಅಭಿವೃದ್ಧಿ ಸಹ ನಿಂತಿಲ್ಲ. ಬೊಮ್ಮಾಯಿ ಅವಧಿಯಲ್ಲಿ ಸರ್ಕಾರಿ ಇಲಾಖೆಗಳಿಗೆ ಅನುದಾನ ಇರಲಿಲ್ಲ. ನಮ್ಮ ಸರ್ಕಾರದಲ್ಲಿ ಎಲ್ಲಾ ಇಲಾಖೆಗಳಿಗೆ ಅನುದಾನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಕೇಂದ್ರಕ್ಕೆ ನಾವು 2 ಲಕ್ಷ ಕೋಟಿ ಜಿ.ಎಸ್.ಟಿ ಹಣ ಕೊಡುತ್ತೆವೆ, ಹೀಗಾಗಿ ಅದರ ಅರ್ಧ ಹಣವಾದರು ಕೇಂದ್ರ ಸರ್ಕಾರ ನಮಗೆ ಕೊಡಬೇಕು. ಸದ್ಯ 36 ಸಾವಿರ ಕೋಟಿ ಜಿ.ಎಸ್.ಟಿ ಹಣ ಮಾತ್ರ ನಮಗೆ ಕೊಟ್ಟಿದ್ದಾರೆ. ನಮ್ಮ ತೆರಿಗೆ ಹಣವನ್ನು ಯಮುನಾ, ಗಂಗಾ ಹೈವೆ ಎಕ್ಸ್ಪ್ರೆಸ್ ಗೆ ಬಳಕೆ ಮಾಡುತ್ತಿದ್ದಾರೆ. ನಮ್ಮ ತೆರಿಗೆ ಹಣದಿಂದ ಉತ್ತರ ಪ್ರದೇಶ, ಬಿಹಾರ ರಾಜ್ಯಗಳಲ್ಲಿ ರಸ್ತೆ ಆಗುತ್ತಿವೆ ಎಂದು ಆಕ್ಷೇಪ ಹೊರ ಹಾಕಿದ್ದಾರೆ.