

ಹಾವೇರಿ: ಕಂತು ವಸೂಲಿಗೆ ಬಂದಿದ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿ ,ಬಲವಂತವಾಗಿ, ಮನೆಯಲ್ಲಿದ್ದ ಚಿನ್ನದ ಓಲೆ, ನಗದು ತೆಗೆದುಕೊಂಡು ಹೋಗಿರುವಂತಹ ಘಟನೆ ,ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ. ಫೈನಾನ್ಸ್ ಸಿಬ್ಬಂದಿ ವಿರುದ್ಧ ಸಾಲ ಮಾಡಿದ್ದ ಸಂಪವ್ವ ತಳಗಟ್ಟಿ, ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಸಿದ್ದಾರೆ.
ಕರ್ನಾಟಕದಲ್ಲಿ ಸುಗ್ರೀವಾಜ್ಞೆ ಜಾರಿಯಾದರೂ ಮೈಕ್ರೋ ಫೈನಾನ್ಸ್ ಗಳ, ಕಿರುಕುಳ ನಿಲ್ಲುತ್ತಿಲ್ಲ. ಇಂತಹ ಘಟನೆಗಳನ್ನು ತಪ್ಪಿಸುವ ಉದ್ದೇಶದಿಂದ ಸುಗ್ರೀವಾಜ್ಞೆ ತಂದಿದ್ದೇವೆ, ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಆದರೆ ರಾಜ್ಯದಲ್ಲಿ ಮಾತ್ರ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಎತೇಚ್ಚವಾಗಿ ಸಾಗುತ್ತಿದೆ.
ಸಂಪವ್ವನ್ನವರು, ಫೈನಾನ್ಸ್ ಕಂಪನಿ ಬಳಿ 50 ಸಾವಿರ ರೂ. ಹಣ ಸಾಲ ಪಡೆದುಕೊಂಡಿದ್ದರು. ತಿಂಗಳಿಗೆ ಎರಡು ಕಂತುಗಳಂತೆ 1250 ರೂ ಕಟ್ಟಲಾಗುತ್ತಿತ್ತು. ಸಂಪವ್ವ ಮತ್ತು ಆಕೆಯ ಮಗಳು ಗದ್ದೆ ಕೆಲಸಕ್ಕೆಂದು ಹೋಗಿರುತ್ತಾರೆ. ಈ ಸಮಯವನ್ನು ಸದುಪಯೋಗ ಪಡಿಸಿಕೊಂಡು, ವಸೂಲಿಯ ನೆಪದಲ್ಲಿ ಫೈನಾನ್ಸ್ ಸಿಬ್ಬಂದಿ ಮನೆಗೆ ನುಗ್ಗಿ, ಮನೆಯಲ್ಲಿ ಇಟ್ಟಿದ್ದ 25 ಸಾವಿರ ರೂ ಹಣ, ಕಿವಿ ಓಲೆ ಕದ್ದು ಪರಾರಿಯಾಗಿದ್ದಾರೆ ಎಂದು ಆರೋಪ ಮಾಡಲಾಗಿದೆ.