
ಗದಗ:ಉಚಿತ ಯೋಜನೆಗಳು ಮಠದ ಖರ್ಚಿಗೆ ಹೊರೆಯಾಗಿವೆ ಎಂದು ಗದಗ ವಿರೇಶ್ವರ ಪುಣ್ಯಾಶ್ರಮದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಅಸಮಾಧಾನ ಹೊರ ಹಾಕಿದ್ದಾರೆ. ಪುಟ್ಟರಾಜ ಗವಾಯಿ, ಪಂಚಾಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಜಾತ್ರೆ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಗ್ಯಾರಂಟಿ ಯೋಜನೆಯಿಂದ, ಜನ ಬಂದು ಆಶ್ರಮದಲ್ಲಿ ಊಟ ಮಾಡುತ್ತಿದ್ದಾರೆ. ಮಠದಲ್ಲಿ ಊಟ ಮಾಡುವವರ ಸಂಖ್ಯೆ ನೂರು ಪಟ್ಟು ಹೆಚ್ಚಾಗಿದೆ.

j3tvkannada
ಉಚಿತ ಯೋಜನೆಗಳು ಮಠದ ಖರ್ಚಿಗೆ ಹೊರೆಯಾಗಿವೆ. ಹೀಗಾಗಿ ಪುಣ್ಯಾಶ್ರಮಕ್ಕೆ ಸರ್ಕಾರ ಅನುದಾನ ನೀಡಬೇಕೆಂದು ಆಗ್ರಹಿಸಿದ್ದಾರೆ. ಬೆಂಗಳೂರು ಬಳಿಯ ಕೆಲ ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರ ಧವಸ ಧಾನ್ಯ ನೀಡುತ್ತಿದೆ. 500 ಕ್ವಿಂಟಲ್ ನಿಂದ 7 ಸಾವಿರ ಕ್ವಿಂಟಲ್ ವರೆಗೆ ಪ್ರತಿ ತಿಂಗಳು ಧವಸ ಧಾನ್ಯ ನೀಡಲಾಗುತ್ತಿದೆ. ಅದೇ ರೀತಿ ಉತ್ತರ ಕರ್ನಾಟಕದ ಆಶ್ರಮಕ್ಕೂ ಕೊಡುಗೆ ನೀಡಬೇಕು. ಪುಣ್ಯಾಶ್ರಮದ ಸಮಗ್ರ ಬೆಳವಣಿಗೆಗೆ ಸರ್ಕಾರ ಅನ್ನ, ಹಣ ನೀಡಬೇಕು ಎಂದು ಸ್ವಾಮೀಜಿಯವರು ಹೇಳಿದ್ದಾರೆ.