
ರಾಯಚೂರು: ವಾರದ ರಜೆ ಪರಿಣಾಮ ಸುಕ್ಷೇತ್ರ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭಾನುವಾರ ಒಂದೇ ದಿನ ಎರಡು ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸಿ ದಾಖಲೆ ನಿರ್ಮಿಸಿದ್ದಾರೆ. ಸಹಜವಾಗಿ ಶ್ರೀಮಠದ ಪ್ರಮುಖ ಕಾರ್ಯಕ್ರಮಗಳ ಸಮಯದಲ್ಲಿ ಇಲ್ಲವೇ ನಿರಂತರ ರಜೆಗಳ ವೇಳೆಯಲ್ಲಿ ಲಕ್ಷಾಂತರ ಭಕ್ತರು ಶ್ರೀಮಠಕ್ಕೆ ಆಗಮಿಸುತ್ತಾರೆ. ಆದರೆ ಈ ಬಾರಿ ವಾರದ ರಜೆಯಲ್ಲಿಯೇ ಎರಡು ಲಕ್ಷಕ್ಕೂ ಹೆಚ್ಚಿನ ಭಕ್ತರು ಬಂದು ಶ್ರೀರಾಘವೇಂದ್ರ ಸ್ವಾಮಿಗಳವರ ಮೂಲ ಬೃಂದಾವನ ದರ್ಶನ ಪಡೆದಿದ್ದಾರೆ.

j3tvkannada
ರಾಜ್ಯ ಸೇರಿದಂತೆ ದೇಶದ ವಿವಿಧ ಪ್ರದೇಶಗಳು ಹಾಗೂ ವಿದೇಶಗಳಿಂದಲೂ ಇಷ್ಟೊಂದು ಪ್ರಮಾಣದಲ್ಲಿ ಆಗಮಿಸಿದ್ದ ಭಕ್ತರಿಗೆ ಶ್ರೀಮಠದಿಂದ ವಿವಿಧ ಧಾರ್ಮಿಕ ಸೇವೆಗಳ ಜೊತೆಗೆ ಅಗತ್ಯ ಸವಲತ್ತುಗಳು ಹಾಗೂ ತೀರ್ಥ ಪ್ರಸಾದದ ವ್ಯವಸ್ಥೆಯನ್ನು ಯಾವುದೇ ರೀತಿಯಲ್ಲಿ ಸಮಸ್ಯೆಯಾಗದಂತೆ ಶ್ರೀಮಠವು ಕಲ್ಪಿಸಿದೆ. ಏಕಕಾಲಕ್ಕೆ ಬಂದ ಲಕ್ಷಾಂತರ ಭಕ್ತರಿಗೆ ದರ್ಶನ, ಪ್ರಸಾದ ಹಾಗೂ ಇತರೆ ಸವಲತ್ತುಗಳನ್ನು ಕಲ್ಪಿಸಿಕೊಡಲು ಶ್ರೀಮಠದಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮಠದ ವ್ಯವಸ್ಥಾಪಕರು ತಿಳಿಸಿದ್ದಾರೆ.