
ಮಂಡ್ಯ: ಕೆ.ಆರ್.ಎಸ್ ಬಳಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಿಸುವುದನ್ನು ಮಂಡ್ಯದ ಜನತೆ ಹಾಗೂ ರೈತ ಸಂಘಗಳು ವಿರೋಧಿಸಿದ ಹೊರತಾಗಿಯೂ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿರುವುದು ಖಂಡನೀಯ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ.

j3tvkannada
ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿರುವ ಸುಮಲತಾ ಅವರು ಸರ್ಕಾರದ ನಡೆಗೆ ಸೋಷಿಯಲ್ ಮೀಡಿಯಾ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಕೇವಲ ಒಂದು ಅಣೆಕಟ್ಟಲ್ಲ, ಅದು ನಮ್ಮ ಇತಿಹಾಸ, ಸಂಸ್ಕೃತಿ ಮತ್ತು ಮಂಡ್ಯದ ಜನತೆಯ ಜೀವನಾಡಿ. ಅದರ ಪಾವಿತ್ರ್ಯತೆ ಮತ್ತು ಪರಿಸರ ಸೂಕ್ಷ್ಮತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ.
ನಮ್ಮ ಮಂಡ್ಯದ ಅಭಿವೃದ್ಧಿಗೆ ಆದ್ಯತೆ ನೀಡುವ ಬದಲು ಇಂತಹ ದುಂದು ವೆಚ್ಚಕ್ಕೆ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಯೋಜನೆಯ ವಿರೋಧಕ್ಕೆ ನನ್ನ ಬೆಂಬಲವಿದೆ. ಶತಮಾನಗಳ ಇತಿಹಾಸವಿರುವ ಕನ್ನಂಬಾಡಿ ಕಟ್ಟೆಯ ಅಸ್ಥಿತ್ವಕ್ಕೆ ಧಕ್ಕೆ ತರುವ ಯಾವುದೇ ಯೋಜನೆಯನ್ನು ಜಾರಿಗೆ ತರಲು ಸ್ವಾಭಿಮಾನಿ ಮಂಡ್ಯದ ಜನತೆ ಅವಕಾಶ ಕೊಡಲಾರೆವು ಎಂದು ಸರ್ಕಾರಕ್ಕೆ ಮಾಜಿ ಸಂಸದೆ ಎಚ್ಚರಿಕೆ ನೀಡಿದ್ದಾರೆ.
ಕೆ.ಆರ್.ಎಸ್.ಬಳಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಸರ್ಕಾರದ ನಡೆಗೆ ಮಂಡ್ಯ ಜನತೆ ಹಾಗೂ ರೈತ ಸಂಘಟನೆಗಳು ಖಂಡನೆ ವ್ಯಕ್ತಪಡಿಸಿದೆ. ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ.