
ಬಾಗಲಕೋಟೆ: ಹುನಗುಂದ ತಾಲೂಕಿನ ಅಮರಾವತಿಯಿಂದ ಬಿಂಜವಾಡಗಿ ಗ್ರಾಮಕ್ಕೆ ಹೋಗುವ ರಸ್ತೆಯ ಪಕ್ಕದಲ್ಲಿ ಇರುವ ದೊಡ್ಡ ಗುಂಡಿಯಲ್ಲಿ ಮೊಸಳೆಯೊಂದು ಪತ್ತೆಯಾಗಿದೆ.

j3tvkannada
ಗುಂಡಿಯಲ್ಲಿ ಮೊಸಳೆಯೊಂದು ವಾಸವಾಗಿದ್ದು ಅದು ಈಗಾಗಲೇ ಎರಡು ಕುರಿಗಳನ್ನು ಬಲಿ ತೆಗೆದುಕೊಂಡಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಜನರು ದಿನನಿತ್ಯ ಗುಂಡಿಯ ಅಕ್ಕ-ಪಕ್ಕದಲ್ಲೇ ಓಡಾಡುತ್ತಿರುತ್ತಾರೆ. ವ್ಯವಸಾಯಕ್ಕಾಗಿ ತಮ್ಮ ಜಮೀನುಗಳಿಗೆ ಹೋಗುತ್ತಾರೆ. ಇದರಿಂದ ಜನರು ತಮ್ಮ ಜೀವವನ್ನು ಕೈಯಲ್ಲಿಟ್ಟುಕೊಂಡು ಓಡಾಡಬೇಕಿದೆ.
ಸುಮಾರು ಮೂರ್ನಾಲ್ಕು ದಿನಗಳಿಂದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹೇಳಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಅಕ್ರೋಶ ವ್ಯಕ್ತಪಡಿಸಿದ್ದಾರೆ.