
ಕಲಬುರಗಿ: ಮಳೆಗಾಲ ಪ್ರಾರಂಭವಾಗಿದ್ದು ವಾತಾವರಣದ ತಂಪಾಗಿದೆ. ಡೆಂಗ್ಯೂ, ಮಲೇರಿಯಾ, ಶೀತ, ನೆಗಡಿ, ಜ್ವರ, ಅಜೀರ್ಣ ಸಮಸ್ಯೆ, ಕಾಲರಾದಂತಹ ಮುಂತಾದ ಸಾಮಾನ್ಯವಾದ ಕಾಯಿಲೆಗಳು ಕಂಡುಬರುತ್ತವೆ. ಇಂತಹ ಸಮಯದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಆದ್ದರಿಂದ ಎಲ್ಲರೂ ಕೂಡಾ ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅವಶ್ಯಕವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾಎಸ್. ಕೇಶ್ವಾರ ಹೇಳಿದರು.

j3tvkannada
ನಗರದ ಶೇಖರೋಜಾದಲ್ಲಿರುವ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಜರುಗಿದ ಮಳೆಗಾಲದ ಆರೋಗ್ಯಕ್ಕೆ ಮುಂಜಾಗೃತಾ ಕ್ರಮಗಳ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮನೆ ಸುತ್ತ ನೀರು ಸಂಗ್ರಹವಾಗದಂತೆ ನೋಡಿಕೊಂಡು ಸ್ವಚ್ಛತೆಯನ್ನು ಕಾಪಾಡುವುದು, ಶುದ್ಧವಾದ ನೀರಿನ ಸೇವನೆ, ಸಮತೋಲನ ಆಹಾರವನ್ನು ಸೇವಿಸುವುದು, ಮಳೆಯಲ್ಲಿ ನೆನೆಯದಂತೆ ಲಕ್ಷ್ಯವಹಿಸುವುದು, ಆಗಾಗ್ಗೆ ಕೈ-ಕಾಲು ಚೆನ್ನಾಗಿ ತೊಳೆದುಕೊಳ್ಳುವುದು, ವಾಸ ಸ್ಥಳದ ಸಮೀಪ ನೀರು ನಿಲ್ಲದಂತೆ ನೋಡಿಕೊಂಡು, ಪರಿಸರ ಸ್ವಚ್ಛವಾಗಿರುವಂತೆ ಕಾಪಾಡುವುದು, ಬೀದಿ ಬದಿಯ ತೆರೆದಿಟ್ಟ ಆಹಾರ ಪದಾರ್ಥಗಳು ಸೇವಿಸದಿರುವುದು, ಶುದ್ಧವಾದ ನೀರನ್ನು ಹೆಚ್ಚಾಗಿ ಸೇವಿಸುವುದು, ಸಮತೋಲನ ಆಹಾರವನ್ನು ಸೇವಿಸಬೇಕೆಂದು ಅನೇಕ ಸಲಹೆ-ಸೂಚನೆಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ.ಪಾಟೀಲ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಜಗನಾಥಗುತ್ತೇದಾರ, ಗುರುರಾಜಕೈನೂರ್, ಗಂಗಾಜ್ಯೋತಿಗಂಜಿ, ಸಂಗಮ್ಮಅತನೂರ, ರೇಷ್ಮಾ ನಕ್ಕುಂದಿ, ಚಂದಮ್ಮ ಮರಾಠಾ, ಶ್ರೀದೇವಿ ಸಾಗರ, ಚಂದ್ರಕಲಾ ಮಠಪತಿ, ಲಕ್ಷ್ಮೀ ಮೈಲಾರಿ, ನಾಗಮ್ಮ ಚಿಂಚೋಳಿ ಸೇರಿದಂತೆ ಇನ್ನು ಮುಂತಾದವರು ಭಾಗವಹಿಸಿದ್ದರು.