

j3tvkananda
ದಕ್ಷಿಣ ಕನ್ನಡ: ಮಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆ ಹೊಡೆತಕ್ಕೆ ಮತ್ತೆ ಭೂಕುಸಿತ ಸಂಭವಿಸಿದೆ. ಮಂಗಳೂರು ಹೊರವಲಯದ ಕಣ್ಣೂರಿನ SH ನಗರ ದಯಾಬು ಎಂಬಲ್ಲಿ ಗುಡ್ಡ ಕುಸಿದು ಮನೆಗೆ ಹಾನಿಯಾಗಿದೆ. ಮನೆಯವರು ಮದುವೆ ಸಮಾರಂಭಕ್ಕೆ ತೆರಳಿದ್ದ ಕಾರಣ ಆಗುತ್ತಿದ್ದ ದೊಡ್ಡ ಅನಾಹುತವು ತಪ್ಪಿದೆ.
ಮೈಮೂನಾ ಎಂಬವರ ಮನೆ ಸಂಪುರ್ಣ ಜಖಂಗೊಂಡಿದೆ. ಗುಡ್ಡ ಕುಸಿತದಿಂದ ಇನ್ನೂ ನಾಲ್ಕು ಮನೆಗಳಿಗೆ ಹಾನಿಯಾಗುವ ಆಂತಕ ಎದುರಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆಗಳನ್ನು ನಡೆಸಿದ್ದಾರೆ. ಅಧಿಕಾರಿಗಳು ಕೆಲವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಇನ್ನೂ ಎರಡು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ.