
ಚಿಕ್ಕಬಳ್ಳಾಪುರ: ಬೈಕ್ಗೆ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಪೋಶೆಟ್ಟಿಹಳ್ಳಿ ಗ್ರಾಮದ ಬಳಿ ನಡೆದಿದೆ.

j3tvkannada
ಮಂಚೇನಹಳ್ಳಿ ತಾಲೂಕಿನ ಹಳೇಬುದ್ದಿವಂತನಹಳ್ಳಿ ಹಾಗೂ ಎಂ ಗುಂಡ್ಲಹಳ್ಳಿ ಅಕ್ಕ ಪಕ್ಕದ ಗ್ರಾಮದ 24 ವರ್ಷದ ಪ್ರಕಾಶ್ ಹಾಗೂ 26 ವರ್ಷದ ಕೃಷ್ಣ ಮೃತರು. ಅಂದ ಹಾಗೆ ಈ ಇಬ್ಬರು ಯುವಕರು ಚಿಕ್ಕಬಳ್ಳಾಪುರ ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಮಾರ್ನಿಂಗ್ ಶಿಫ್ಟ್ ಇದ್ದ ಕಾರಣ ಬೆಳಿಗ್ಗೆ ಜೊತೆಯಾಗಿ ಒಂದೇ ಬೈಕಿನಲ್ಲಿ ಕೆಲಸಕ್ಕೆ ಬರುತ್ತಿದ್ದರು. ಈ ವೇಳೆ ಪೋಶೆಟ್ಟಿಹಳ್ಳಿ ಬಳಿ ವೇಗವಾಗಿ ಬಂದ ಕ್ಯಾಂಟರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ತಲೆಗೆ ಗಂಭೀರವಾದ ಗಾಯಗಳಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.