
ರಾಮನಗರ(ಕನಕಪುರ): ರಾಜ್ಯದ ಉಪ ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ಅಭಿವೃದ್ಧಿಗಾಗಿ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ನಗರದಲ್ಲಿಯೂ ಸಹ ಮೂಲ ಸೌಲಭ್ಯಗಳಾದ ರಸ್ತೆ ಮತ್ತು ಚರಂಡಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್. ರವಿ ಹೇಳಿದರು.

j3tvkannada
ಕನಕಪುರ ನಗರದ 27 ನೇ ವಾರ್ಡ್ನ ನೀಲಕಂಠೇಶ್ವರ ಶಾಲೆಯ ಪಕ್ಕದ ರಸ್ತೆಯಲ್ಲಿ ಸುಮಾರು 33 ಲಕ್ಷ ರೂ.ವೆಚ್ಚದ ಚರಂಡಿ ಮತ್ತು ಕಾಂಕ್ರೀಟ್ ರಸ್ತೆ ಕಾಮಗಾರಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ನಗರೋತ್ಥಾನದ ಹಣದಲ್ಲಿ ನಗರದ ಅಭಿವೃದ್ಧಿ ಕಾಮಗಾರಿಗಳು ನಗರದ ಪ್ರತಿ ವಾರ್ಡ್ನಲ್ಲಿ ನಡೆಯುತ್ತಿದ್ದು, ಅಗತ್ಯವಿದ್ದ ಕಡೆಗಳಲ್ಲಿ ಪ್ರಥಮ ಆದ್ಯತೆ ನೀಡಲಾಗುತ್ತಿದೆ. ಇಲ್ಲಿನ ಸದಸ್ಯರ ಆದ್ಯತೆ ಮೇರೆಗೆ ಇಲ್ಲಿನ ಕಾಮಗಾರಿ ನಡೆಸಲಾಗುತ್ತಿದೆ ಎಂದರು.
ಕನಕಪುರ ನಗರದಲ್ಲಿ ದಿನದ 24 ಗಂಟೆ ಶುದ್ಧ ಕುಡಿಯುವ ನೀರಿನ ಸರಬರಾಜಿಗಾಗಿ ಸುಮಾರು 130 ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭಿಸಲಾಗಿದ್ದು, ನಗರದೆಲ್ಲೆಡೆ ನೂತನ ಪೈಪ್ಲೈನ್ ಕಾಮಗಾರಿ ನಡೆಯುತ್ತಿದ್ದು, ನಗರದ ಪ್ರತಿ ಬಡಾವಣೆಗಳಲ್ಲಿ ಶುದ್ಧ ಕಾವೇರಿ ಕುಡಿಯುವ ನೀರಿನ ಕಾಮಗಾರಿ ಪ್ರಗತಿಯಲ್ಲಿದೆ. ಮುಂದಿನ ದಿನಗಳಲ್ಲಿ ನಗರದಲ್ಲಿ ದಿನದ 24 ಗಂಟೆಯೂ ಕಾವೇರಿ ನೀರು ಸರಬರಾಜು ಆಗಲಿದೆ ಎಂದರು.
ಕಾಮಗಾರಿ ಭೂಮಿ ಪೂಜೆಯಲ್ಲಿ ನಗರಸಭೆ ಅಧ್ಯಕ್ಷೆ ಉಮಾರಾಜು, ಸದಸ್ಯರಾದ ಮೋಹನ್, ವಿಜಯ್ಕುಮಾರ್, ಗ್ಯಾರಂಟಿ ಯೋಜನೆ ಅಧ್ಯಕ್ಷ ದಿಲೀಪ್, ನಗರಸಭೆ ಆಯುಕ್ತ ಮಹದೇವ್ ಸೇರಿದಂತೆ ಅನೇಕರು ಹಾಜರಿದ್ದರು.