
ವಿಜಯಪುರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಭವನ ನಿರ್ಮಾಣಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿದ್ದೇವೆ. ಈಗಾಗಲೆ ಕಸಾಪ ಕಟ್ಟಡದ ನೀಲನಕ್ಷೆ ಸಿದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಭಿಪ್ರಾಯ ವ್ಯಕ್ತಪಡಿಸಿದರು.

j3tvkannada
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕಸಾಪ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳೊಂದಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಟ್ಟಡ ನಿರ್ಮಾಣ ಕುರಿತು ನಡೆದ ಸಭೆಯಲ್ಲಿ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿ ಅನುಮತಿ ಪಡೆಯಲಾಗುವುದು. ಪ್ರಸ್ತಾವನೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ ಬಿ ಪಾಟೀಲರಿಂದ ಸರ್ಕಾರಕ್ಕೆ ಪ್ರಸ್ತಾವಕ್ಕೆ ಅನುಮತಿ ಕೇಳಲಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ 2013 ರಲ್ಲಿ ವಿಜಯಪುರ ನಗರದಲ್ಲಿ ಜರುಗಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಉಳಿದ 2 ಕೋಟಿ 25 ಲಕ್ಷ ರೂ ಗಳು ಜಮೆ ಇರುತ್ತವೆ. ಈ ಹಣ ಠೇವಣಿ ಇರುವದರಿಂದ ಐದು ಕೋಟಿವರೆಗೆ ಆಗಿದೆ. ಇನ್ನುಳಿದ ಹಣ ಜಿಲ್ಲೆಯ ಸಚಿವರಿಂದ, ಶಾಸಕರಿಂದ, ವಿಧಾನ ಪರಿಷತ್ತಿನ ಸದಸ್ಯರಿಂದ, ಲೋಕಸಭಾ ಸದಸ್ಯರಿಂದ ಹಾಗೂ ಸರಕಾರದ ಅನುದಾನ ಪಡೆದು ಕನ್ನಡದ ಹೆಮ್ಮೆಯ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಭವನವನ್ನು ನಿರ್ಮಾಣ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದರು.
ಈ ಸಂದರ್ಭದಲ್ಲಿ ಕಟ್ಟಡ ನೀಲನಕ್ಷೆ ಸಿದ್ಧಪಡಿಸಿದ ವಿಠ್ಠಲ ಟಂಕಸಾಲಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಮಾಲಿಪಾಟೀಲ, ಕಸಾಪ ಗೌರವ ಅಧ್ಯಕ್ಷೆ ಭಾರತಿ ಪಾಟೀಲ, ಕಸಾಪ ಪದಾಧಿಕಾರಿಗಳಾದ ಅಭಿಷೇಕ ಚಕ್ರವರ್ತಿ, ಮಹಮ್ಮದಗೌಸ ಹವಾಲ್ದಾರ, ರವಿ ಕಿತ್ತೂರ, ಬಿ.ಎಂ. ಅಜೂರ, ಕಮಲಾ ಮುರಾಳ, ಜಯಶ್ರೀ ಹಿರೇಮಠ, ಶಿಲ್ಪಾ ಭಸ್ಮೆ, ರಾಜೇಶ್ವರಿ ಮೋಪಗಾರ, ಅಜು೯ನ ಶಿರೂರ, ಶಿವಾನಂದ ಮಂಗಾನವರ, ಡಾ. ಶೈಲಾ ಬಳಗಾನೂರ, ಎಂ.ಬಿ. ಮೋಪಗಾರ, ಮಹಮ್ಮದ ವಾಲಿಕಾರ ಮುಂತಾದವರು ಉಪಸ್ಥಿತರಿದ್ದರು.