
ರಾಯಚೂರು: ಬಡವರಿಗಾಗಿ ಅನ್ನ ಭಾಗ್ಯ ಯೋಜನೆಯಲ್ಲಿ ಸರಕಾರ ಅಕ್ಕಿಯನ್ನು ನೀಡುತ್ತಿದೆ. ಆದರೆ ಕೆಲವರು ಇದನ್ನು ದುರುಪಯೋಗಗೊಳಿಸುತ್ತಾರೆ. ಅನ್ನ ಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಖದೀಮರು ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡೋದು ಹೊಸತೇನೂ ಅಲ್ಲ. ರಾಜ್ಯದ ಎಲ್ಲಾ ಭಾಗಗಳಲ್ಲಿ ಇದು ನಡೆಯುತ್ತದೆ. ರಾಯಚೂರಲ್ಲಿ ಇಂದು ಮಂತ್ರಾಲಯ ಮಾರ್ಗವಾಗಿ ಅಕ್ರಮವಾಗಿ ಗದ್ವಾಲ್ಗೆ ಅಕ್ಕಿಯನ್ನು ಸಾಗಿಸುತ್ತಿದ್ದ ಮೂವರನ್ನು ನಗರದ ನೇತಾಜಿನಗರ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

j3tvkannada.in
ಅರೋಪಿಗಳನ್ನು ತೆಲಂಗಾಣ ಗದ್ವಾಲ್ ಮೂಲದ ರಾಜೇಶ್, ರಮೇಶ್ ಮತ್ತು ಶಿವರಾಜ್ ಎಂದು ಗುರುತಿಸಲಾಗಿದೆ. ಅವರು ಅಕ್ಕಿ ಸಾಗಿಸುತ್ತಿದ್ದ ಸರಕು ಸಾಗಣೆ ವಾಹನದಲ್ಲಿ 41 ಅಕ್ಕಿ ಮೂಟೆಗಳು ಪತ್ತೆಯಾಗಿವೆ. ಫ್ರೀಯಾಗಿ ಸಿಗುವ ಅಕ್ಕಿಯನ್ನು ಅಕ್ರಮವಾಗಿ ದುಡ್ಡಿಗೆ ಮಾರಾಟ ಮಾಡುವ ಸಾಹಸಕ್ಕೆ ಇಳಿದು ಈ ಖದೀಮರು ಸಿಕ್ಕಿ ಬಿದ್ದಿದ್ದಾರೆ.