
ಬೆಂಗಳೂರು: ಓಮ್ನಿ ಕಾರುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ.

j3tvkannada
ಬಂಧಿತ ಆರೋಪಿಗಳನ್ನು ಉಮೇಶ್, ತಬ್ರೇಜ್ ಮತ್ತು ಜಬೀರ್ ಖಾನ್ ಎಂದು ಗರುತಿಸಲಾಗಿದೆ. ಕಳೆದ ಮೇ ತಿಂಗಳಿನಲ್ಲಿ ಆರೋಪಿಗಳು ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಓಮ್ನಿ ಕಾರನ್ನು ಕಳ್ಳತನ ಮಾಡಿದ್ದರು. ಕಳ್ಳತನದ ದೃಶ್ಯ ಸಿ.ಸಿ.ಟಿ.ವಿಯಲ್ಲಿ ಸೆರೆಯಾಗಿತ್ತು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ವಿದ್ಯಾರಣ್ಯಪುರ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಬಂಧಿತರಿಂದ ಪೊಲೀಸರು 12 ಲಕ್ಷ ರೂ. ಮೌಲ್ಯದ 6 ಓಮ್ನಿ ಕಾರುಗಳನ್ನು ಜಪ್ತಿ ಮಾಡಿದ್ದಾರೆ.
ಈ ಮೂವರನ್ನು 2020 ರಲ್ಲಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ರ್ಯಾಕ್ಟರ್ ಕಳ್ಳತನ ಕೇಸ್ನಲ್ಲಿ ಬಂಧಿಸಲಾಗಿತ್ತು. ಜೈಲಿಂದ ಹೊರ ಬಂದ ಮೇಲೆ ಟ್ರ್ಯಾಕ್ಟರ್ ಬಿಟ್ಟು ಕಾರು ಕಳ್ಳತನಕ್ಕಿಳಿದಿದ್ದರು.