
ರಾಯಚೂರು: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆ ಹಿನ್ನೆಲೆ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ರಾಯಚೂರಿನ ದೇವದುರ್ಗ ತಾಲೂಕಿನ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಭಾಗಶಃ ಮುಳುಗಡೆಯಾಗಿದೆ.

j3tvkannada
ನಾರಾಯಣಪುರ ಜಲಾಶಯದಿಂದ ಹರಿದು ಬರುತ್ತಿರುವ ನೀರಿನಿಂದ ಕೃಷ್ಣಾ ನದಿ ತೀರದ ದೇವಸ್ಥಾನ ಭಾಗಶಃ ಮುಳುಗಡೆಯಾಗಿದೆ. ಸದ್ಯ ಜಲಾಶಯದಿಂದ 25 ಗೇಟ್ಗಳ ಮೂಲಕ 75 ಸಾವಿರ ಕ್ಯೂಸೆಕ್ ಹೊರ ಹರಿವು ಇದೆ.
ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದರೆ ಹೂವಿನ ಹೆಡಗಿ ಸೇತುವೆ ಮುಳುಗಡೆಯಾಗುವ ಭೀತಿ ಎದುರಾಗಿದೆ. ಸೇತುವೆ ಮುಳುಗಡೆಯಾದರೆ ದೇವದುರ್ಗದಿಂದ ಯಾದಗಿರಿ, ಕಲಬುರಗಿ ಸಂಪರ್ಕ ಕಡಿತವಾಗುತ್ತದೆ. ನಾರಾಯಣಪುರ ಜಲಾಶಯಕ್ಕೆ ಸದ್ಯ 75,000 ಕ್ಯೂಸೆಕ್ ಒಳ ಹರಿವು ಇದ್ದು, ಜನರಿಗೆ ನದಿಗೆ ಇಳಿಯದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.