
ಬೀದರ್: ಪ್ರಕಾಶ್ ಹಾಗೂ ಶಿವಾಜೀ ಎಂಬ ಯುವಕರಿಬ್ಬರು ಜಿಲ್ಲೆಯ ಚಿಟಗುಪ್ಪ ತಾಲೂಕಿನ ವಿಠಲಪುರ ಗ್ರಾಮದ ಐತಿಹಾಸಿಕ ಬಾವಿಯಲ್ಲಿ ಈಜಲು ತೆರಳಿದ್ದರು. ಆಳದ ಬಾವಿಯಲ್ಲಿ ಸಿಲುಕಿಕೊಂಡಿದ್ದ ಸ್ನೇಹಿತನನ್ನು ಕಾಪಾಡಲು ಹೋಗಿ ಇಬ್ಬರೂ ನೀರುಪಾಲಾಗಿದ್ದಾರೆ.

ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಹಾಗೂ ಪೊಲೀಸರು, ಯುವಕರ ಮೃತದೇಹಗಳನ್ನು ಹೊರ ತೆಗೆದರು. ಬೆಮ್ಮಳಕೇಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜಿಲ್ಲೆಯ ಹುಲಸೂರು ತಾಲೂಕಿನ ಗಡಿಗೌಡಗಾಂವ್ ಗ್ರಾಮದ ಕೆರೆಯಲ್ಲಿ ಆಕಾಶ್ ಕಂಟೆಪ್ಪ ಗುಂಗೆ ಎಂಬ ಯುವಕ ನೀರುಪಾಲಾಗಿದ್ದಾನೆ. ಸ್ನೇಹಿತರ ಜೊತೆ ಈಜಲು ಹೋಗಿದ್ದಾಗ ಈಜು ಬಾರದೇ ಆಕಾಶ್ ಮೃತಪಟ್ಟಿದ್ದಾನೆ.