
ಬಾಗಲಕೋಟೆ : ಸ್ವಾಮೀಜಿಯೊಬ್ಬರ ಕಾಲಿಗೆ ಪೊಲೀಸರು ಬಿದ್ದು ಆಶೀರ್ವಾದ ಪಡೆದ ವಿಡಿಯೋ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯು ಆರು ಜನ ಪೊಲೀಸರನ್ನು ವರ್ಗಾವಣೆ ಮಾಡಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ವಿಡಿಯೋದಲ್ಲಿ ಸ್ವಾಮೀಜಿಯೊಬ್ಬರು ಕಾರಿನಲ್ಲಿ ಕುಳಿತಿದ್ದಾಗ ಟ್ರಾಫಿಕ್ ಪೊಲೀಸ್ ಸೇರಿದಂತೆ ಇತರೆ ಐವರು ನಾಗರೀಕ ಪೊಲೀಸ್ ಪೇದೆಗಳು ಸಮವಸ್ತ್ರದಲ್ಲಿಯೇ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿರುತ್ತಾರೆ. ಜೊತೆಗೆ, ಪೊಲೀಸರು ಸ್ವಾಮೀಜಿಯಿಂದ ಹಣವನ್ನೂ ಪಡೆದಿರುತ್ತಾರೆ. ಈ ವಿಡಿಯೋ ವೈರಲ್ ಆದ ಬೆನ್ನಲ್ಲಿಯೇ 6 ಜನ ಪೊಲೀಸರನ್ನು ವರ್ಗಾವಣೆ ಮಾಡಿ ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆಯು ಆದೇಶ ಹೊರಡಿಸಿದೆ.