
ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ರೈತರ ಧಾನ್ಯ ಕಳ್ಳತನ ಮಾಡುತ್ತಿದ್ದ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸವಣೂರು ತಾಲ್ಲೂಕಿನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನ ನಡೆದಿದೆ. ಬಂಧಿತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ಜಾಮೀನು ನೀಡದಂತೆ ರೈತರು ಮನವಿ ಮಾಡಿದ್ದಾರೆ. ಪೊಲೀಸರು ಲಕ್ಷಾಂತರ ರೂಪಾಯಿ ಮೌಲ್ಯದ ಧಾನ್ಯವನ್ನು ವಶಪಡಿಸಿಕೊಂಡಿದ್ದಾರೆ.
ಕೃಷಿ ಪ್ರಧಾನವಾದ ಜಿಲ್ಲೆ ಹಾವೇರಿ ರೈತರಿಗೆ ಒಂದಿಲ್ಲೊಂದು ಸಮಸ್ಯೆಗಳು ಕಾಡುತ್ತಲೇ ಇದೆ. ರೈತರು ಕಷ್ಟಪಟ್ಟು ಬೆಳೆದ ಬೆಳೆಗಳನ್ನು, ಕಳ್ಳರು ಕಳ್ಳತನ ಮಾಡುತ್ತಿದ್ದರು. ಈಗ ಸವಣೂರು ಪೊಲೀಸರು ಖದೀಮರನ್ನು ಬಂಧಿಸಿದ್ದು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಜೊತೆಗೆ ಬಂಧಿತ ಆರೋಪಿಗಳಿಗೆ ವಕೀಲರು ವಕಾಲತ್ತು ನಡೆಸಬಾರದು, ಮತ್ತು ಜಾಮೀನು ಸಹ ಕೊಡಬಾರದು ಎಂದು ರೈತರು ಮನವಿ ಮಾಡಿದ್ದಾರೆ.