
ಮಡಿಕೇರಿ: ಕಾಫಿ ಬೆಳೆಗಾರ ಕೆ.ಕೆ.ತಿಮ್ಮಯ್ಯ ಎಂಬುವವರಿಗೆ ಸೇರಿದ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ತೋಟದ ಕಾರ್ಮಿಕರಾಗಿರುವ ಭವಾನಿ ಎಂಬುವವರ 9 ವರ್ಷದ ಪುತ್ರಿ ಮೃತ ದುರ್ದೈವಿ.
ತನ್ನ ಸಹಪಾಠಿಗಳೊಂದಿಗೆ ಕೆರೆಯ ಬದಿಯಲ್ಲಿ ಆಟವಾಡುತ್ತಿದ್ದ ಸಂದರ್ಭ ಈಕೆ ಹಾಗೂ ಇನ್ನಿಬ್ಬರು ಮಕ್ಕಳು ಕೆರೆಗೆ ಹಾರಿದ್ದರು. ಆದರೆ ಕೆರೆಯಲ್ಲಿ ನೀರು ಬತ್ತಿ ಕೆಸರು ತುಂಬಿದ್ದರಿಂದ ಮೂವರು ಕೆಸರೊಳಗೆ ಸಿಲುಕಿ ಹೊದ್ದಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ತಳೀಯ ಕಾರ್ಮಿಕರು ಮೂವರನ್ನು ಮೇಲೆತ್ತಲಾಯಿತಾದರು, ಅದರಲ್ಲಿ ಓರ್ವ ಬಾಲಕಿಯು, ಕೆಸರಿಂದ ಹೊರ ತೆಗೆಯುವಷ್ಟರಲ್ಲೇ ಅಸುನೀಗಿದ್ದಾಳೆ ಎನ್ನಲಾಗಿದೆ.