
ಯಾದಗಿರಿ: ಶಹಾಪುರ ತಾಲೂಕಿನಲ್ಲಿ ಭಯಾನಕ ಎರಡು ಹತ್ಯೆ ನಡೆದಿದೆ. ದಲಿತ ಮುಖಂಡ ಮತ್ತು ಆತನ ಸಹಚರನನ್ನು, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೊದಲು ದಲಿತ ಮುಖಂಡನನ್ನು ಹತ್ಯೆ ಮಾಡಲಾಗಿದ್ದು, ನಂತರ ಭಯದಿಂದ ಓಡಿಹೋಗಿದ್ದ ಸಹಚರನನ್ನು ಸಹಾ ಕೊಲೆ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಎರಡು ಪ್ರತ್ಯೇಕ ಗ್ಯಾಂಗ್ನಿಂದ ದಲಿತ ಮುಖಂಡ ಹಾಗೂ ಆತನ ಸಹಚರನ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಸಾದ್ಯಾಪುರ ಗ್ರಾಮದ ಬಳಿ ನಡೆದಿದೆ. ಮದ್ದರಕಿ ಗ್ರಾಮದ ಮಾಪಣ್ಣ ಹಾಗೂ ಅಲಿಸಾಬ್ ಹತ್ಯೆಯಾದವರು. ಬೈಕ್ನಲ್ಲಿ ತೆರಳುತ್ತಿದ್ದಾಗ ಹಿಂಬಾಲಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಹತ್ಯೆ ಮಾಡಲಾಗಿದೆ. ಕೊಲೆ ಮಾಡಿದವರ ಮಾಹಿತಿ ಮತ್ತು ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.