
ಧಾರವಾಡ: ಕುರುಬಗಟ್ಟಿಯ ಯುವ ರೈತ ಹಳದಿ ಕಲ್ಲಂಗಡಿಯನ್ನು ಬೆಳೆಯುವ ಮೂಲಕ ಯಶಸ್ವಿಯಾಗಿದ್ದಾರೆ. ಸಾಮಾನ್ಯ ವಿಧದಂತೆಯೇ, ಹಳದಿ ಕಲ್ಲಂಗಡಿ ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ, ಏಕೆಂದರೆ ಇದು ವಿಟಮಿನ್ ಎ, ಸಿ, ಬೀಟಾ-ಕ್ಯಾರೋಟಿನ್ ಮತ್ತು ಪೊಟ್ಯಾಸಿಯಮ್ ಅನ್ನು ಹೊಂದಿರುತ್ತದೆ. ಆದರೆ, ಎಲ್ಲೆಡೆ ಕೆಂಪು ಬಣ್ಣದ ಸಾಂಪ್ರದಾಯಿಕ ತಳಿಯು ಪ್ರಚಲಿತವಿದ್ದರೆ, ಧಾರವಾಡದ ರೈತ ಹಳದಿ ಬಣ್ಣದ ಕಲ್ಲಂಗಡಿಯನ್ನು ಬೆಳೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಹನಿ ನೀರಾವರಿಯಿಂದ ಉತ್ತಮ ಇಳುವರಿ ಪಡೆದಿದ್ದು, ಕೆಂಪು ಕಲ್ಲಂಗಡಿಗಿಂತ ಹೆಚ್ಚಿನ ಲಾಭ ಗಳಿಸಿದ್ದಾರೆ. ಹಳದಿ ಕಲ್ಲಂಗಡಿ ಸಿಹಿಯಾಗಿದ್ದು, ಆರೋಗ್ಯಕರ ಗುಣಗಳನ್ನು ಹೊಂದಿದೆ. ಹಳದಿ ಕಲ್ಲಂಗಡಿ ಬೆಳೆದು ಯಶಸ್ವಿಯಾಗುವ ಮೂಲಕ ಇತರೆ ರೈತರಿಗೆ ಮಾದರಿಯಾಗಿದ್ದಾರೆ. ಆಧುನಿಕ ಬೇಸಾಯ ಪದ್ಧತಿಯಿಂದಾಗಿ ನದಿ ತೀರದ ಪ್ರದೇಶಕ್ಕೆ ಮಾತ್ರ ಸೀಮಿತವಾಗಿದ್ದ ಕಲ್ಲಗಂಡಿ ಹಣ್ಣು ಧಾರವಾಡ ಜಿಲ್ಲೆಗೂ ಕೆಲ ವರ್ಷಗಳ ಹಿಂದೆ ಪ್ರವೇಶ ಪಡೆದಿದೆ.