
ಕೊಡಗು: ಕೃಷಿ ಚಟುವಟಿಕೆಗಳಿಗೆ ಪ್ರತೀ ಗ್ರಾಮಗಳಿಗೂ ರಸಗೊಬ್ಬರ ಸಮರ್ಪಕವಾಗಿ ಸರಬರಾಜು ಆಗಬೇಕು. ಕೃಷಿಕರಿಂದ ಯಾವುದೇ ರೀತಿ ದೂರು ಬರದಂತೆ ರಸಗೊಬ್ಬರ ಮಾರಾಟಗಾರರು, ಕಂಪನಿಗಳು, ಸಹಕಾರ ಸಂಘಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ.

ಮುಂಗಾರು ಸಂದರ್ಭದಲ್ಲಿ ರಸಗೊಬ್ಬರ ದಾಸ್ತಾನು ಸಂಬಂಧ ಜಿಲ್ಲಾಧಿಕಾರಿಗಳು ಜಿಲ್ಲೆಯ ರಸಗೊಬ್ಬರ ಕಂಪನಿ ಪ್ರತಿನಿಧಿಗಳು, ಸಹಕಾರ ಸಂಘಗಳು, ಕೃಷಿ ಪರಿಕರ ಮಾರಾಟ ಹಾಗೂ ಸಹಕಾರ ಸಂಘ ಪ್ರತಿನಿಧಿಗಳ ಜೊತೆ ಪೂರ್ವಭಾವಿ ಸಭೆಯನ್ನು ನಡೆಸಿದ್ದಾರೆ. ಹೊರ ಜಿಲ್ಲೆಗಳಿಗೆ ರಸಗೊಬ್ಬರ ಸಾಗಣೆ ಮೇಲೆಯೂ ಕಣ್ಗಾವಲು ವಹಿಸುವಂತೆ ಸೂಚನೆ ಕೊಟ್ಟಿದ್ದಾರೆ.