
ಕನಕಪುರ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಟಿಪ್ಪರ್ ಗುದ್ದಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೊಡ್ಡಾಲಹಳ್ಳಿಯಲ್ಲಿ ಶುಕ್ರವಾರ ನಡೆದಿದೆ.

ದೊಡ್ಡಾಲಹಳ್ಳಿ ಸಿದ್ದಾಪ್ಪಾಜಿ ದೇವಸ್ಥಾನ ಸಮೀಪದ ನಿವಾಸಿ ಜಯಮ್ಮ (57) ಮೃತಪಟ್ಟಿರುವ ಮಹಿಳೆ. ಮೃತರಿಗೆ ಒಬ್ಬ ಮಗನಿದ್ದಾನೆ. ಜಯಮ್ಮ ಶುಕ್ರವಾರ ಮಧ್ಯಾಹ್ನ ದೊಡ್ಡಾಲಹಳ್ಳಿ ಸರ್ಕಲ್ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದಂತಹ ಟಿಪ್ಪರ್ ಲಾರಿ ಗುದ್ದಿದ ಪರಿಣಾಮ ಕೆಳಕ್ಕೆ ಬಿದ್ದು ತೀವ್ರ ರಕ್ತಸ್ರಾವದಿಂದ ಮಹಿಳೆ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಅಪಘಾತದ ನಂತರ ಟಿಪ್ಪರ್ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಸಾತನೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ಅಪಘಾತದ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಮೃತರ ಕುಟುಂಬದವರು ಘಟನೆ ಸಂಭಂದ ದೂರು ನೀಡಿದ್ದಾರೆ. ಈ ದೂರಿನಡಿ ಪ್ರಕರಣ ದಾಖಲಿಸಿ ಮೃತ ದೇಹವನ್ನು ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.