
ಬಳ್ಳಾರಿ: ರಾಜ್ಯದಲ್ಲಿ ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರು ಅನಕ್ಷರಸ್ಥರಾಗಿದ್ದು, ಕಟ್ಟಡ ನಿರ್ಮಾಣ ಕೆಲಸಗಳಲ್ಲಿ ಹಗಲಿರುಳು ನಿರಂತರವಾಗಿ ಕಡಿಮೆ ಕೂಲಿಗೆ ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ಸೌಲಭ್ಯಗಳಿಲ್ಲದೆ ನಿರಂತರವಾಗಿ ಶೋಷಣೆಗೆ ಒಳಗಾಗಿದ್ದು, ಅವರ ಉತ್ತಮ ಜೀವನಕ್ಕಾಗಿ ರಾಜ್ಯ, ಕೇಂದ್ರ ಸರ್ಕಾರಗಳು ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು’ ಎಂದು ಸಂಡೂರು ತಾಲ್ಲೂಕಿನ ಕರ್ನಾಟಕ ರಾಜ್ಯ ಕಟ್ಟಡ, ಹಾಗೂ ಕಾರ್ಮಿಕರ ಸಂಘದ ಅಧ್ಯಕ್ಷ ವಿ.ದೇವಣ್ಣ ಹೇಳಿದರು.

j3tvkannada
ತಾಲ್ಲೂಕಿನ ಹಳೆದರೋಜಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕ ಸಂಘದ ವತಿಯಿಂದ ಭಾನುವಾರ ನಡೆದ ಕಾರ್ಮಿಕರ ಘಟಕದ ಸಮಾವೇಶದಲ್ಲಿ ಮಾತನಾಡಿದರು.ಕಾರ್ಮಿಕರು ಯಾವುದೇ ಸುರಕ್ಷಾ ಸಲಕರಣೆಗಳು ಇಲ್ಲದೆ ಕಡಿಮೆ ಕೂಲಿಗೆ ಅತಿ ಹೆಚ್ಚು ಸಮಯಕ್ಕೆ ದುಡಿಯುತ್ತಿದ್ದು ಅವರ ಬದುಕು ಶೋಚನೀಯವಾಗಿದೆ. ಕಾರ್ಮಿಕರಿಗೆ ಪಿಂಚಣಿ, ಹೆರಿಗೆ, ಅಂತ್ಯಕ್ರಿಯೆ ವೆಚ್ಚ, ಶೈಕ್ಷಣಿಕ, ಆರೋಗ್ಯ ಸಹಾಯಧನವನ್ನು ಸರ್ಕಾರ ಶೀಘ್ರವಾಗಿ ಒದಗಿಸಬೇಕು’ ಎಂದು ಒತ್ತಾಯಿಸಿದರು.