
ತುಮಕೂರು: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ₹2.25 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ನಂದಿನಿ ಕ್ಷೀರ ಭವನವನ್ನು ರೈಲ್ವೆ ಮತ್ತು ಜಲಶಕ್ತಿ ಯೋಜನೆ ರಾಜ್ಯಖಾತೆ ಸಚಿವ ವಿ.ಸೋಮಣ್ಣ, ಗೃಹ ಸಚಿವ ಜಿ.ಪರಮೇಶ್ವರ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ತುಮುಲ್ ಅಧ್ಯಕ್ಷ ಎಚ್.ವಿ.ವೆಂಕಟೇಶ್, ಶಾಸಕ ಕೆ.ಷಡಕ್ಷರಿ ಉದ್ಘಾಟಿಸಿದರು.

j3tvkannada
ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಪರಮೇಶ್ವರ, ಹಾಲು ಉತ್ಪಾದನೆ ಶಿಸ್ತಿನಿಂದ ನಡೆಯುತ್ತಿರುವ ಉದ್ಯಮವಾಗಿದ್ದು, ದೇಶದ ಆರ್ಥಿಕ ಪರಿಸ್ಥಿತಿ ಜೊತೆಗೆ ಜನರ ನಿತ್ಯದ ಬದುಕೂ ಸುಧಾರಿಸಿದೆ. ಆಡಳಿತ, ಹಣಕಾಸು, ರೈತರ ದೃಷ್ಟಿಯಿಂದ ಅನುಕೂಲವಾಗಿದೆ. ಕ್ಷೀರ ಭಾಗ್ಯ ಯೋಜನೆ ಮೂಲಕ ರಾಜ್ಯದಲ್ಲಿ 65 ಲಕ್ಷ ಮಕ್ಕಳಿಗೆ ಹಾಲು ನೀಡುವ ಮೂಲಕ ಪೌಷ್ಟಿಕಾಂಶದ ಜೊತೆಗೆ ರಾಗಿ ಮಾಲ್ಟ್ ನೀಡಲಾಗುತ್ತಿದೆ, ಎಂದರು.