
ಮುದ್ದೇಬಿಹಾಳ: ಬೇಸಿಗೆ ಕಾಲದಲ್ಲಿ ನೀರಿಗಾಗಿ ಪ್ರಾಣಿ, ಪಕ್ಷಿಗಳು ಬಹಳಷ್ಟು ಪರದಾಡಿ ಜೀವ ಕಳೆದುಕೊಳ್ಳುವ ಸಾಧ್ಯತೆ ಇದೆ. ಮಾನವೀಯ ದೃಷ್ಟಿಯಿಂದ ನಾವೆಲ್ಲರೂ ಪಕ್ಷಿಗಳಿಗೆ ಮಣ್ಣಿನ ಪಾತ್ರೆಗಳಲ್ಲಿ ನೀರು ಇಡುವ ಕೆಲಸ ಮಾಡಬೇಕು’ ಎಂದು, ವಿಶ್ವ ಗುಬ್ಬಚ್ಚಿ ದಿನ’ದ ಅಂಗವಾಗಿ ಪಟ್ಟಣದ ಹಸಿರು ತೋರಣ ಉದ್ಯಾನದಲ್ಲಿ ಮಣ್ಣಿನ ಪಾತ್ರೆಗಳ ವಿತರಣೆ ಕಾರ್ಯಕ್ರಮದಲ್ಲಿ, ಹಸಿರು ತೋರಣ ಗೆಳೆಯರ ಬಳಗದ ಮಾಜಿ ಅಧ್ಯಕ್ಷರಾದ ನಾಗಭೂಷಣ ನಾವದಗಿ ಹೇಳಿದರು.

ಈ ಸಂದರ್ಭದಲ್ಲಿ, ವಕೀಲರ ಸಂಘದ ಮಾಜಿ ಅಧ್ಯಕ್ಷ ಎಚ್.ವೈ.ಪಾಟೀಲ, ವೀರೇಶ ಇಟಗಿ, ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿದರು. ಆರ್. ಕಾಮಟೆ, ಬಿ.ಎಸ್. ಮೇಟಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ರವಿ ಗೂಳಿ, ಗೌರವಾಧ್ಯಕ್ಷ ಜಿ.ಎಂ.ಹುಲಗಣ್ಣಿ, ಉಪಾಧ್ಯಕ್ಷ ಸೋಮಶೇಖರ ಚೀರಲದಿನ್ನಿ, ಕಾರ್ಯದರ್ಶಿ ಅಮರೇಶ ಗೂಳಿ, ಸೇರಿದಂತೆ ಅನೇಕರು ಭಾಗಿಯಾಗಿದ್ದರು.