
ಬಳ್ಳಾರಿ: ಸಂಡೂರು ತಾಲ್ಲೂಕಿನ ವೆಂಕಟಗಿರಿ ಗ್ರಾಮದ ಬಳಿ ಲಾರಿ- ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಸಂಡೂರು ಪಟ್ಟಣದ ನಿವಾಸಿಗಳಾದ ವಿ.ಪಿ.ಶ್ರೀನಿವಾಸ್ (47), ಸಹೋದರ ನಾರಾಯಣಸ್ವಾಮಿ (38) ಮೃತರು.
ಈ ಇಬ್ಬರು ಸಂಡೂರು ಪಟ್ಟಣದಿಂದ ಹೊಸಪೇಟೆಯ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಹೊಸಪೇಟೆ ಕಡೆಯಿಂದ ಬಂದ ಲಾರಿ- ಬೈಕ್ ಮಧ್ಯೆ ಅಪಘಾತ ಸಂಬಂಧಿಸಿ ದುರ್ಘಟನೆ ನಡೆದಿದೆ. ಈ ಸಂಬಂಧ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.