
ತುಮಕೂರು: ಗೃಹ ಸಚಿವ ಡಾ.ಜಿ. ಪರಮೇಶ್ವರ್ಗೆ ಶೀಘ್ರದಲ್ಲೇ ಮುಖ್ಯಮಂತ್ರಿ ಭಾಗ್ಯ ಇದೆ ಎಂದು ಹಾಲುಮತದ ಗೊರವಯ್ಯ ಕಾರ್ಣಿಕ ಭವಿಷ್ಯ ನುಡಿದಿದ್ದಾರೆ. ತುಮಕೂರಿನ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ಭೇಟಿ ನೀಡಿದಾಗ ಈ ಭವಿಷ್ಯ ನುಡಿದಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಅವಣದಲ್ಲಿರುವ ಉಸ್ತುವಾರಿ ಸಚಿವರ ಕಚೇರಿ. ಹಾಲುಮತ ಜನಾಂಗದ ಗೊರವಯ್ಯನವರಿಂದ ಕಾರ್ಣಿಕ ಭವಿಷ್ಯ ಸಿಕ್ಕಿದೆ. ಕಚೇರಿಗೆ ಆಕಸ್ಮಿಕವಾಗಿ ಭೇಟಿ ನೀಡಿದ ಸಂದರ್ಭದಲ್ಲಿ ಭವಿಷ್ಯ ನುಡಿದಿದ್ದಾರೆ. ಮಾರ್ಚ್ 20ರಂದು ಕಚೇರಿಗೆ ಬಂದಿದ್ದ ಮೂವರು ಗೊರವಯ್ಯರು. ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಶೀಘ್ರದಲ್ಲಿಯೇ ಸಿಎಂ ಸ್ಥಾನದಿಂದ ಕೆಳಗಿಳಿದು, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸಿಎಂ ಆಗಲಿ ಎಂದು ಆಶೀರ್ವಾದಿಸಿದ್ದಾರೆ. ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಡಾ. ನಾಗಣ್ಣ ಅವರಿಗೆ ಭವಿಷ್ಯ ನುಡಿದ್ದಿದ್ದಾರೆ. ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಯ್ತು ಗೊರವಯ್ಯನ ಕಾರ್ಣಿಕ ಭವಿಷ್ಯ. ಪವರ್ ಶೇರಿಂಗ್, ಹನಿಟ್ರ್ಯಾಪ್ ಗದ್ದಲದ ನಡುವೆ ಸಿ.ಎಂ ಬದಲಾವಣೆ ಚರ್ಚೆ ಮುಂಚೂಣಿಗೆ ಬಂದಿದೆ.
