
ಬಾಗಲಕೋಟೆ: ಭಾರತೀಯ ಜಾನಪದ ಸಂಸ್ಕೃತಿ ಶ್ರೇಷ್ಠವಾದುದು. ನಮ್ಮ ರೈತಾಪಿ ವರ್ಗದವರು ಆಚರಣೆ ಮಾಡಿಕೊಂಡು ಬಂದಿರುವ ನಮ್ಮ ನೆಲದ ಸಂಸ್ಕೃತಿಯ ಅರಿವನ್ನು ಮುಂದಿನ ಜನಾಂಗಕ್ಕೂ ತಿಳಿಯಪಡಿಸುವ ಮತ್ತು ಅದನ್ನು ಮುಂದೆ ತೆಗೆದುಕೊಂಡು ಹೋಗುವ ಮಹತ್ವದ ಜವಾಬ್ದಾರಿ ನಮ್ಮ ಯುವಕರ ಮೇಲಿದೆ’ ಎಂದು ಜಮಖಂಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ವೈ.ವೈ.ಕೊಕ್ಕನವರ ತಿಳಿಸಿದರು.

ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಜಾನಪದ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಜನಪದರ ಆಹಾರ, ವಿಹಾರ, ರೀತಿ-ನೀತಿ, ಆಟಗಳು, ಆಚರಣೆಗಳು, ಹಾಡುಗಳು, ನೃತ್ಯಗಳು, ವಾದ್ಯಗಳು, ಮನೆಯಲ್ಲಿ ಬಳಸುವ ಉಪಕರಣಗಳು ನಮ್ಮಿಂದ ದೂರವಾಗುತ್ತಿವೆ. ಇವೆಲ್ಲವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದು ತಿಳಿಸಿದರು.