
ತುಮಕೂರು : ಸಂವಿಧಾನ ಬದಲಾವಣೆ ಬಗ್ಗೆ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಮುಖಂಡರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು. ಸಂವಿಧಾನ ಸೂರ್ಯ ಇದ್ದಂತೆ. ಅದರ ಬೆಳಕು ಪಡೆಯಬಹುದಷ್ಟೇ, ಮುಟ್ಟಲು ಸಾಧ್ಯವಿಲ್ಲ. ಸಂವಿಧಾನ ಬದಲಾವಣೆ ಮಾಡುವುದಾಗಿ ಶಿವಕುಮಾರ್ ಹೇಳಿರುವುದು ಖಂಡನೀಯ. ಸಾಂವಿಧಾನಿಕ ಹುದ್ದೆಯಲ್ಲಿರುವವರು ಬಾಲಿಶ ಹೇಳಿಕೆ ನೀಡಿದ್ದು, ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಅಂಜನಪ್ಪ ಆಗ್ರಹಿಸಿದರು. ಭಾರತ್ ಜೋಡೊ ಯಾತ್ರೆ ಸಮಯದಲ್ಲಿ ಕಾಂಗ್ರೆಸ್ ನಾಯಕರು ಸಂವಿಧಾನ ಪ್ರತಿ ಕೈಯಲ್ಲಿಡಿದು ನಡೆದಿದ್ದರು. ಇದರ ಉದ್ದೇಶ ಸಂವಿಧಾನ ರಕ್ಷಣೆಯೋ ಅಥವಾ ದುರ್ಬಲಗೊಳಿಸುವುದೋ ಎಂಬುವುದನ್ನು ಅವರೇ ಹೇಳಬೇಕು. ದೇಶದ ಎಲರೂ ಗೌರವಿಸುವ ಸಂವಿಧಾನಕ್ಕೆ ಕಾಂಗ್ರೆಸ್ ನಾಯಕರು ಅಪಮಾನ ಮಾಡುತಿದಾರೆ’ ಎಂದು ಟೀಕಿಸಿದರು. ಭಾರತ್ ಜೋಡೊ ಯಾತ್ರೆ ಸಮಯದಲ್ಲಿ ಕಾಂಗ್ರೆಸ್ ನಾಯಕರು ಸಂವಿಧಾನ ಪ್ರತಿ ಕೈಯಲ್ಲಿಡಿದು ನಡೆದಿದ್ದರು. ಇದರ ಉದ್ದೇಶ ಸಂವಿಧಾನ ರಕ್ಷಣೆಯೋ ಅಥವಾ ದುರ್ಬಲಗೊಳಿಸುವುದೋ ಎಂಬುವುದನ್ನು ಅವರೇ ಹೇಳಬೇಕು.

ದೇಶದ ಎಲ್ಲರೂ ಗೌರವಿಸುವ ಸಂವಿಧಾನಕ್ಕೆ ಕಾಂಗ್ರೆಸ್ ನಾಯಕರು ಅಪಮಾನ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಸ್ಮಾರ್ಟ್ ಮೀಟರ್ ಟೆಂಡರ್ನಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಮೇಲೆ ₹15 ಸಾವಿರ ಕೋಟಿ ಹಗರಣದ ಆರೋಪ ಕೇಳಿ ಬಂದಿದೆ ಎಂದರು. ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ‘ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಪರಿಶಿಷ್ಟರಿಗೆ ಅನ್ಯಾಯವಾಗುತ್ತಿದೆ. ಪರಿಶಿಷ್ಟರ ಹಣ ದುರ್ಬಳಕೆ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರುಪಯೋಗದ ಮೂಲಕ ಅನ್ಯಾಯ ಮಾಡಿದೆ. ಈಗ ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಬಗ್ಗೆ ಹೇಳಿರುವುದು ಸಹಿಸಲಾಗುವುದಿಲ್ಲ. ಹೇಳಿಕೆ ವಾಪಸ್ ಪಡೆದು, ಜನರ ಕ್ಷಮೆ ಕೇಳಬೇಕು’ ಎಂದು ಒತ್ತಾಯಿಸಿದರು. ಜೆಡಿಎಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಜೆಡಿಎಸ್ ಮುಖಂಡರಾದ ಸೋಲಾರ್ ಕೃಷ್ಣಮೂರ್ತಿ, ಎಸ್.ಡಿ.ಕೃಷ್ಣಪ್ಪ, ಗೋವಿಂದರಾಜು, ಸೊಗಡು ವೆಂಕಟೇಶ್, ತಾಹೇರಾ ಕುಲ್ವಂ, ಭೈರೇಶ್, ಕೆಂಪರಾಜು, ದೊಡ್ಡರಿ ಬಸವರಾಜು, ಲಕ್ಷ್ಮಿನರಸಿಂಹರಾಜು, ಮಧುಗೌಡ ಇತರರು ಹಾಜರಿದ್ದರು.