
ವಿಜಯಪುರ: ಆಲಮಟ್ಟಿ ಜಲಾಶಯದ ಮುಂಭಾಗದ ರೈಲ್ವೆ ಸೇತುವೆ ಕೆಳಗೆ ಕೃಷ್ಣಾ ನದಿಯಲ್ಲಿ ಯುಗಾದಿ ಪಾಡ್ಯದ ಅಂಗವಾಗಿ ಸ್ನಾನಕ್ಕೆ ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿದ್ದಾರೆ.

J3tvkannada
ಸೋಮಶೇಖರ ಬೊಮ್ಮಣ್ಣ ದೇವರಮನಿ (15) ಶವ ಪತ್ತೆಯಾಗಿದೆ. ಕೃಷ್ಣಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಮಲ್ಲಪ್ಪ ಬಸಪ್ಪ ಬಗಲಿ (15), ಪರನಗೌಡ ಮಲ್ಲಪ್ಪ ಬೀಳಗಿ (17) ಕಾಣೆಯಾಗಿದ್ದು, ಅವರಿಗಾಗಿ ನದಿಯಲ್ಲಿ ಹುಡುಕಾಟ ನಡೆದಿದೆ.
ಘಟನೆ ನಡೆದ ತಕ್ಷಣ ಮೀನುಗಾರರು ಕಾಣೆಯಾದವರ ಹುಡುಕಾಟ ನಡೆಸಿ ಒಬ್ಬ ಯುವಕನ ಶವ ಹೊರಗೆ ತೆಗೆದಿದ್ದಾರೆ. ಉಳಿದ ಇಬ್ಬರ ಹುಡುಕಾಟಕ್ಕಾಗಿ ಬಾಗಲಕೋಟೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶೋಧಕಾರ್ಯ ನಡೆಸುತ್ತಿದ್ದಾರೆ ಹಾಗೂ ಬಾಗಲಕೋಟೆ ಸಿಪಿಐ ಎಚ್. ಆರ್. ಪಾಟೀಲ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.