
ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರದ ಪ್ರತಿ ಮನೆಗೂ ಒಳಚರಂಡಿ ಸಂಪರ್ಕ, ಕುಡಿಯುವ ನೀರಿನ ನಲ್ಲಿ ಸಂಪರ್ಕ ನೀಡುವ ಕೆಲಸ ಸದ್ಯದಲ್ಲೇ ಆಗಲಿದೆ. ಜತೆಗೆ ನಗರದ ಎಲ್ಲ ವಾರ್ಡ್ಗಳಲ್ಲೂ ರಸ್ತೆ, ಬೀದಿದೀಪ ಅಳವಡಿಸಿ ಸ್ವಚ್ಛತೆ ಕಾಪಾಡುವ ಕೆಲಸಕ್ಕೆ ಆದ್ಯತೆ ನೀಡಲಾಗುವುದು ಎಂದು ಶಿಡ್ಲಘಟ್ಟ ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.

j3tvkannada
ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನಗರದಲ್ಲಿ ಎರಡನೇ ಹಂತದ ಒಳಚರಂಡಿ ಕಾಮಗಾರಿ, ಅಮೃತ ಯೋಜನೆಯಡಿ ಮನೆ ಮನೆಗೂ ಕುಡಿಯುವ ನೀರಿನ ನಲ್ಲಿ ಸಂಪರ್ಕ ನೀಡುವ ಕಾಮಗಾರಿ ಸದ್ಯದಲ್ಲೇ ಆರಂಭವಾಗಲಿದೆ. ಮುಖ್ಯವಾಗಿ ನಗರದಲ್ಲಿ ಸುಮಾರು 10 ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣವಾಗಲಿದೆ. ಏಪ್ರಿಲ್ 14 ರಂದು ಭೂಮಿ ಪೂಜೆ ಹಮ್ಮಿಕೊಳ್ಳಲಾಗಿದೆ ಎಂದರು. ಕೈಗಾರಿಕೆಗಳಿಗೆ ಭೂ ಸ್ವಾಧೀನಪಡಿಸಿಕೊಳ್ಳುವ ಜಮೀನು ಫಲಾವತ್ತಾಗಿದ್ದರೆ ಆ ಜಮೀನು ಬಿಡುವಂತೆ ಸರ್ಕಾರದಲ್ಲಿ ಮನವಿ ಮಾಡುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುವುದಾಗಿ ತಿಳಿಸಿದರು.