
ರಾಮನಗರ: ಶಾಲಾ ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳು ಬಿಡಿಸಲು ತಾಲ್ಲೂಕಿನ ಬನ್ನಿಕುಪ್ಪೆ ಕ್ಲಸ್ಟರ್ನ ಸಮೂಹ ಸಂಪನ್ಮೂಲ ಶಿಕ್ಷಕ ಚಿಕ್ಕವೀರಯ್ಯ ಟಿ.ಎನ್ ಆರಂಭಿಸಿರುವ ‘ಮೊಬೈಲ್ ಬಿಡಿ ಪುಸ್ತಕ ಹಿಡಿ’ ಅಭಿಯಾನಕ್ಕೆ ರಾಜ್ಯದಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

3tvkannada
ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಮೂರೇ ದಿನದಲ್ಲಿ 10 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡಿದೆ. ವಿದ್ಯಾರ್ಥಿಗಳ ಜೊತೆಗೆ ಪೋಷಕರನ್ನೂ ಒಳಗೊಂಡಿರುವ ಅಭಿಯಾನವು ಕ್ಲಸ್ಟರ್ ವ್ಯಾಪ್ತಿಯ 14 ಶಾಲೆಗಳಲ್ಲಿ ನಡೆಯುತ್ತಿದೆ. ವಾರಕ್ಕೊಮ್ಮೆ ನಡೆಯುವ ಅಭಿಯಾನವು ವಿದ್ಯಾರ್ಥಿಗಳಲ್ಲಿ ಮೊಬೈಲ್ ಬಳಕೆಯನ್ನು ತಗ್ಗಿಸಿ, ಪುಸ್ತಕದತ್ತ ಆಸಕ್ತಿ ಹೊರಳಿಸಿದೆ. ಮಕ್ಕಳಿಗೆ ಮೊಬೈಲ್ ನೀಡದೆ,ಪಠ್ಯ ಮತ್ತು ಪಟ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪೋಷಕರಲ್ಲಿ ಜಾಗೃತಿ ಮೂಡಿಸುವಲ್ಲಿ ಅಭಿಯಾನ ಯಶಸ್ವಿಯಾಗಿದೆ.