
ಹುಬ್ಬಳ್ಳಿ : ಕಾಲೇಜು ವಿದ್ಯಾರ್ಥಿನಿ ನೇಹಾಳನ್ನು ಮುಸ್ಲಿಂ ಯುವಕನೋರ್ವ ಹತ್ಯೆ ಮಾಡಿದ ಪ್ರಕರಣ ದೇಶಾದ್ಯಂತ ಸುದ್ದಿಯಾಗಿತ್ತು. ಇದರ ಬೆನಲ್ಲೇ ಮುಸ್ಲಿಂ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿಯೋರ್ವಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಯುವತಿಯ ಫೋಟೋ ಇಟ್ಟುಕೊಂಡು ಸಿರಾಜ್ ಮದುವೆಯಾಗುವಂತೆ ಟಾರ್ಚರ್ ನೀಡಿದ್ದಾನೆ. ಇದರಿಂದ ಬೇಸತ್ತು ಯುವತಿ ಆತ್ಮಹತ್ಯಗೆ ಯತ್ನಿಸಿದ್ದಾಳೆ.
ಯುವಕನೋರ್ವ ಖಾಸಗಿ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿದ ಹಿನ್ನೆಲೆಯಲ್ಲಿ ಯುವತಿಯೋರ್ವಳ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನನ್ನೇ ಪ್ರೀತಿಸಬೇಕು , ನನ್ನನ್ನೇ ಮದುವೆಯಾಗಬೇಕೆಂದು ಸಿರಾಜ್ ಯುವತಿ ವಿದ್ಯಾಳಿಗೆ ಕಿರುಕುಳ ನೀಡಿದ್ದಾನೆ. ಅಲ್ಲದೇ ಹಲ್ಲೆ ಸಹ ಮಾಡಿದ್ದಾನೆ. ಇದರಿಂದ ಮನನೊಂದ ವಿದ್ಯಾ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆಗ ಕೂಡಲೇ ಕುಟುಂಬಸ್ಥರು ವಿದ್ಯಾಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇನ್ನು ಯುವತಿಗೆ ಕಿರುಕುಳ ನೀಡುತ್ತಿದ್ದ ಸಿರಾಜ್ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಇನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಯುವತಿಯ ಆರೋಗ್ಯ ವಿಚಾರಿಸಿದರು. ಇನ್ನು ಇದೇ ವೇಳೆ ಯುವತಿಯ ಕುಟುಂಬಸ್ಥರಿಂದ ಪ್ರಕರಣದ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕಮಿಷನರ್ ಎನ್.ಶಶಿಕುಮಾರ್, ಮದುವೆಯಾಗುವಂತೆ ಪೀಡಿಸುತ್ತಿದ್ದ, ಅದಲ್ಲದೆ ಹಲ್ಲೆ ಮಾಡಿದ್ದ. ಹೀಗಾಗಿ ಕಿರುಕುಳ ನೀಡಿದ್ದ ಯುವಕ ಸಿರಾಜ್ ನನ್ನು ಅರೆಸ್ಟ್ ಮಾಡಲಾಗಿದೆ. ಇನ್ನು ಯುವತಿ ಜೀವಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಮಾಹಿತಿ ನೀಡಿದರು.
ಇತ್ತೀಚೆಗೆ ಇದೇ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹ ಹಿರೇಮಠ ಹತ್ಯೆ ಪ್ರಕರಣ ಭಾರೀ ಸದ್ದು ಮಾಡಿತ್ತು. ಪ್ರೀತಿ ವಿಚಾರಕ್ಕೆ ಫಯಾಜ್ ಎನ್ನುವಾತ ಕಾಲೇಜಿನಲ್ಲೇ ನೇಹಾಳನ್ನು ಚಾಕುವಿನಿಂದ ಚುಚ್ಚಿ ಕೊಲೆಗೈದಿದ್ದ. ಬಳಿಕ ಈ ಪ್ರಕರಣದಲ್ಲಿ ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಹಿಂದೂ ಮುಸ್ಲಿಂ ನಾಯಕರ ನಡುವೆ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿತ್ತು.