
ಬೆಂಗಳೂರು: ಅಧಿಕಾರಿಗಳ ಬೇಜವಾಬ್ಧಾರಿ ಹಾಗೂ ನಿರ್ಲಕ್ಷ್ಯದಿಂದ ಬಿ.ಎಂ.ಟಿ.ಸಿ ಸಿಬ್ಬಂದಿಗಳಿಗೆ, ವೇತನ ವಿಳಂಬವಾಗಿದೆ. ಮಾರ್ಚ್ 3 ಆದರೂ ವೇತನ ಬಿಡುಗಡೆ ಮಾಡದ ಅಧಿಕಾರಿಗಳ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಕಳೆದ ಫೆಬ್ರವರಿ 2ನೇ ವಾರದಂದು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರು,ತಿಂಗಳ ಮೊದಲ ದಿನವೇ ಬಿ.ಎಂ.ಟಿ.ಸಿ ಸಿಬ್ಬಂದಿಗಳಿಗೆ ಹಾಗೂ ನೌಕರರಿಗೆ ವೇತನ ನೀಡಬೇಕು ಎಂದು ಆದೇಶ ಹೊರಡಿಸಿದ್ದರು. ಅದರಂತೆ ಮಾರ್ಚ್ ಒಂದರಂದು ಬಿ.ಎಂ.ಟಿ.ಸಿ ಸಿಬ್ಬಂದಿ ಹಾಗೂ ನೌಕರರಿಗೆ ವೇತನ ಬಿಡುಗಡೆ ಮಾಡಬೇಕಿತ್ತು. ಆದರೆ, ಮಾರ್ಚ್ 1, ಕಳೆದು ಇಂದಿಗೆ ಎರಡು ದಿನಗಳಾದರು ಇನ್ನೂ ವೇತನ ಬಿಡುಗಡೆಯಾಗಿಲ್ಲ.

ವೇತನ ಇನ್ನೂ ಭಾರದ ಕಾರಣ ಬಿ.ಎಂ.ಟಿ.ಸಿ ಅಧಿಕಾರಿಗಳ ವಿರುದ್ಧ ನೌಕರರು ಹಾಗೂ ಸಿಬ್ಬಂದಿಗಳು, ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರ, ಆದೇಶಕ್ಕೂ, ಸಹಾ ಸಂಬಂಧಪಟ್ಟ ಅಧಿಕಾರಿಗಳು, ಕಿಮ್ಮತ್ತು ಕೊಡುವುದಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ.