
ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕಿನ ಕೆಂಗುಂಟೆಯಲ್ಲಿ ಭಾನುವಾರ ಶಾಸಕ ಎಂ.ಚಂದ್ರಪ್ಪ 4 ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.

ಕೆಂಗುಂಟೆ- ರಾಮಘಟ್ಟ- ಕೊರಟಿಕೆರೆ ಮಾರ್ಗದಲ್ಲಿ ರಸ್ತೆ ಸಂಪರ್ಕ ಇಲ್ಲದೆ ಜನ ಪರಿತಪಿಸುತ್ತಿದ್ದರು. ಈ ಭಾಗದಲ್ಲಿ ಕಪ್ಪು ಎರೆ ಮಣ್ಣು ಇರುವುದರಿಂದ ಮಳೆಗಾಲದಲ್ಲಿ ಸಂಚಾರ ಕಷ್ಟವಾಗಿತ್ತು. ಇದನ್ನು ಮನಗಂಡು ಈ ಮೊದಲು 50 ಲಕ್ಷ ವೆಚ್ಚದಲ್ಲಿ 1 ಕಿ.ಮೀ. ಡಾಂಬರ್ ರಸ್ತೆ ನಿರ್ಮಿಸಿದ್ದೆ. ಈಗ ಮುಂದಿನ ಭಾಗದಲ್ಲಿ ಸುಸಜ್ಜಿತ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುವುದು. ಡಿಸೆಂಬರ್ ಒಳಗೆ ದುಮ್ಮಿ ಕೆರೆ ಸೇರಿ ತಾಲ್ಲೂಕಿನ ಎಲ್ಲ ಕೆರೆಗಳಿಗೆ ಭದ್ರಾ ನೀರು ತುಂಬಿಸಲಾಗುವುದು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಗ್ರಾಮದ ಒಳಗೆ ₹10 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆಗೆ ಭೂಮಿಪೂಜೆ ನೆರವೇರಿಸಲಾಯಿತು. ಬಿಜೆಪಿ ಮುಖಂಡರ ಟಿ.ಪಿ.ಬಸವರಾಜ್, ನಿವೃತ್ತ ಎಂಜಿನಿಯರ್ ರಾಜಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಪುಟ್ಟಣ್ಣ, ಮಹೇಂದ್ರಾಚಾರ್, ಜಿ.ಪಿ.ಮಂಜು, ಮಲ್ಲಿಕಾರ್ಜುನ್, ಪ್ರಸನ್ನ ಹಾಗೂ ಗ್ರಾಮಸ್ಥರು ಇದ್ದರು.