

ತುಮಕೂರು : ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ 4ರಷ್ಟು ಮೀಸಲಾತಿ ನೀಡುವ ವಿಧೇಯಕ್ಕೆ ಒಪ್ಪಿಗೆ ನೀಡಬಾರದು ಎಂದು ಒತ್ತಾಯಿಸಿ ಬಜರಂಗದಳದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟಿಸಿದರು. ಪಟ್ಟಣದ ಶನೇಶ್ವರ ದೇಗುಲದಿಂದ ತಹಶೀಲ್ದಾರ್ ಕಚೇರಿ ವರೆಗೆ ಪ್ರತಿಭಟನ ಮೆರವಣಿಗೆ ನಡೆಸಿ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಬೇಡಿಕೆ ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಿದರು. ಸಂವಿಧಾನದ ಪ್ರಕಾರ ಧರ್ಮ, ಜಾತಿಗಳ ಆಧಾರದಲ್ಲಿ ತಾರತಮ್ಯ ಮಾಡಬಾರದು ಎಂಬ ತತ್ವಕ್ಕೆ ವಿದೇಯಕ ತಿದ್ದುಪಡಿ ವಿರುದ್ಧವಾಗಿದೆ. ರಾಜ್ಯ ಸರ್ಕಾರ ಮತ ಬ್ಯಾಂಕ್ಗಾಗಿ ಇಂತಹ ತಿದ್ದುಪಡಿ ಮಾಡುತ್ತಿರುವುದು ಖಂಡನೀಯ ಎಂದರು. ಈ ಕೂಡಲೇ ತಿದ್ದುಪಡಿ ಹಿಂಪಡೆಯಬೇಕು. ರಾಜ್ಯಪಾಲರು ಯಾವುದೇ ಕಾರಣಕ್ಕೂ ಈ ವಿಧೇಯಕ್ಕೆ ಅನುಮೋದನೆ ನೀಡಬಾರದು ಎಂದು ಒತ್ತಾಯಿಸಿದರು. ಭಜರಂಗದಳದ ಜಿಲ್ಲಾ ಸಂಯೋಜಕ ಎನ್.ವಿ. ಸುಮನ್, ತಾಲ್ಲೂಕು ಸಂಯೋಜಕ ರವಿ, ಕಾರ್ಯದರ್ಶಿ ವಾಸು, ಗೋರಕ್ಷ ಪ್ರಮುಖ್ ಕಾರ್ತಿಕ್ ಮಧು, ಧನು, ನಾಗೇಂದ್ರ, ಮಹೇಶ್, ರವಿ, ಅನಿಲ್ ಕುಮಾರ್ ಉಪಸ್ಥಿತರಿದ್ದರು.